ಹಂಪಿಯಲ್ಲಿ ಸಂಗೀತ ಸಂಜೆ

ಹೊಸಪೇಟೆ (ವಿಜಯನಗರ): ಹಂಪಿ ಜಾತ್ರೆ ಪ್ರಯುಕ್ತ ಮರಿದೇವ ಸಂಗೀತ ಸಾಂಸ್ಕೃತಿಕ ಕಲಾವೃಂದದಿಂದ ಇತ್ತೀಚೆಗೆ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ 24ನೇ ಭಕ್ತಿ ಭಾವನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಾನ್ನಿಧ್ಯ ವಹಿಸಿದ್ದ ವಿದ್ಯಾರಣ್ಯ ಭಾರತಿ ಸ್ವಾಮೀಜಿ, ಯುವಕರು ವಿದೇಶಿ ಕಲೆಗಳಿಗೆ ಮಾರು ಹೋಗದೆ ನಮ್ಮ ದೇಶಿಯ ಕಲೆಗಳಾದ ಶಾಸ್ತ್ರೀಯ ಸಂಗೀತ, ನೃತ್ಯ, ಜಾನಪದ ಇತರೆ ಕಲೆಗಳನ್ನು ರೂಢಿಸಿಕೊಂಡು ಉಳಿಸಿ, ನಮ್ಮ ಸಂಸ್ಕೃತಿ ಎತ್ತಿ ಹಿಡಿಯಬೇಕು ಎಂದರು.
ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಂಪಮ್ಮ, ಸದಸ್ಯ ಹನುಮಂತಪ್ಪ, ಪಿಡಿಒ ರಾಜೇಶ್ವರಿ, ಅರ್ಚಕ ಮೋಹನ್ ಚಿಕ್ಭಟ್ಟ ಜೋಶಿ, ಕಲಾವೃಂದದ ಸಂಸ್ಥಾಪಕ ಅಧ್ಯಕ್ಷ ಅಂಗಡಿ ವಾಮದೇವ, ಎಚ್.ಕೆ.ಶರಣೇಶ್ ಇದ್ದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.