ಮಂಗಳೂರು: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ಈಚೆಗೆ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ತರಬೇತುದಾರ ರಾಜೇಂದ್ರ, ಎಸ್ಡಿಎಂ ಕಾಲೇಜಿನ ಸಿಬ್ಬಂದಿ ಹಾಗೂ ಸಹಾಯಕ ದೈಹಿಕ ನಿರ್ದೇಶಕ ಹರಿದಾಸ್ ಕೂಳೂರು, ಉಡುಪಿಯ ಕ್ರೀಡಾ ಇಲಾಖೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇದ್ದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಇದ್ದು, ಸಂಜೆ ಜಡ್ಡು ಗ್ರಾಮದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ.