ಇಲ್ಲಿನ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕೆಲವರು ಅಧಿಕಾರ ದುರ್ಬಳಕೆ, ಲಂಚ ಸ್ವೀಕರಿಸಿ ಭ್ರಷ್ಟಾಚಾರದಲ್ಲಿ ತೊಡಗಿರುತ್ತಾರೆ. ಇಂತಹ ಘಟನೆಗಳು ಗಮನಕ್ಕೆ ಬಂದರೆ ಎ.ಸಿ.ಬಿ. ಗಮನಕ್ಕೆ ತರಬೇಕು. ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.