ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಂಗಾಮತ ಸಮುದಾಯಕ್ಕೆ ಟಿಕೆಟ್‌ ನೀಡಿ’

Last Updated 4 ಏಪ್ರಿಲ್ 2018, 20:25 IST
ಅಕ್ಷರ ಗಾತ್ರ

ಬೆಂಗಳೂರು: ಅಂಬಿಗ, ಬೆಸ್ತ, ಕೋಲಿ, ಕಬ್ಬಲಿಗ, ಮೊಗವೀರ, ತಳವಾರ ಹೀಗೆ 39 ಒಳಪಂಗಡಗಳಲ್ಲಿ ಹಂಚಿಹೋಗಿರುವ ಗಂಗಾಮತ ಸಮುದಾಯ ರಾಜ್ಯದ 18 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಸಮುದಾಯದವರಿಗೆ ಟಿಕೆಟ್‌ ನೀಡಬೇಕು ಎಂದು ಅಖಿಲ ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾದ ಅಧ್ಯಕ್ಷೆ ಅಂಬಿಕಾ ಜಾಲಗಾರ ಆಗ್ರಹಿಸಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಸಮುದಾಯದವರಿಗೆ ಟಿಕೆಟ್‌ ನೀಡಿ ರಾಜಕೀಯದಲ್ಲಿ ಪ್ರಾತಿನಿಧ್ಯ ಕಲ್ಪಿಸಿ ಎಂದು ಮನವಿ ಮಾಡಿಕೊಳ್ಳಲಾಗಿದೆ. ಮೂರೂ ಪಕ್ಷದವರು ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ ಎಂದರು.

40 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಮತದಾರರು ನಿರ್ಣಾಯಕರಾಗಿದ್ದಾರೆ. ಈ ಅಸಂಘಟಿತ ಸಮುದಾಯ ಆರ್ಥಿಕವಾಗಿ ತೀರಾ ಹಿಂದುಳಿ
ದಿರುವುದರಿಂದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ನಮ್ಮನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

ಮಹಾಸಭಾದ ರಾಜ್ಯ ಕಾರ್ಯದರ್ಶಿ ಪ್ರಕಾಶ್‌ ತಲಾರಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಸವರಾಜ ಜಾಲಗಾರ್‌, ಜಯಮ್ಮ, ಶಾರದಮ್ಮ, ಪದ್ಮಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT