ಕಾಲೇಜಿನ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ ಮಾತನಾಡಿ, ‘ನೂತನ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಂಶಗಳ ಜೊತೆಗೆ ಸ್ಥಳೀಯ ಭಾಷೆಗಳಿಗೆ ಒತ್ತು ನೀಡಲಾಗಿದೆ. ನಾಲ್ಕು ವರ್ಷಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಅಧ್ಯಯನ, ಸಂಶೋಧನೆಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಕಲಿಕೆಯ ಆರಂಭದಲ್ಲೇ ಗುರಿ ನಿರ್ದಿಷ್ಟ ಪಡಿಸಿಕೊಂಡರೆ ಉತ್ತಮ ಫಲಿತಾಂಶಕ್ಕೆ ದಾರಿಯಾಗಲಿದೆ’ ಎಂದರು.