‘ಕಂಪ್ಲಿ ನಿವಾಸಿಯಾದ ಗೌಸಿಯಾ ಅವರನ್ನು ಚಿತ್ತವಾಡ್ಗಿಯ ರಫೀಕ್ ಎನ್ನುವವರಿಗೆ ಕೊಟ್ಟು ಜೂ. 28ರಂದು ಮದುವೆ ಮಾಡಿಕೊಡಲಾಗಿತ್ತು. ವರದಕ್ಷಿಣೆಗಾಗಿ ಗಂಡನ ಮನೆಯವರು ಪೀಡಿಸುತ್ತಿದ್ದರು. ಸೆ. 3ರಂದು ಗೌಸಿಯಾಗೆ ಚಿತ್ರಹಿಂಸೆ ನೀಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೆ. 5ರಂದು ಸಾವನ್ನಪ್ಪಿದ್ದಾರೆ. ಮನೆಯ ಮೆಟ್ಟಿಲಿನಿಂದ ಬಿದ್ದು ಗೌಸಿಯಾ ಗಾಯಗೊಂಡಿದ್ದರು ಎಂದು ಆಕೆಯ ಗಂಡನ ಮನೆಯವರು ತಿಳಿಸಿದ್ದಾರೆ. ಆದರೆ, ಆಕೆಯ ಕತ್ತಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಹಾಗಾಗಿ ಆಕೆಯ ಸಾವಿನ ಕುರಿತು ತನಿಖೆ ನಡೆಸಿ, ಅದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಿಕಂದರ್ ದೂರು ಕೊಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.