ಕಮಲಾಪುರದ ವಸ್ತು ಸಂಗ್ರಹಾಲಯ, ಹಂಪಿಯ ವಿಜಯ ವಿಠಲ ದೇವಸ್ಥಾನ, ಕಮಲ ಮಹಲ್, ರಾಣಿ ಸ್ನಾನಗೃಹ, ಸಾಸಿವೆಕಾಳು ಗಣಪ, ಕಡಲೆಕಾಳು ಗಣೇಶ ಸೇರಿದಂತೆ ಇತರೆ ಸ್ಮಾರಕಗಳ ಪ್ರವೇಶ ದ್ವಾರದಲ್ಲಿ ಪ್ರವೇಶದ ಮೇಲೆ ನಿರ್ಬಂಧ ಹೇರಿದ ಪತ್ರ ಅಂಟಿಸಲಾಗಿತ್ತು. ಪ್ರವೇಶ ದ್ವಾರಕ್ಕೆ ಬೀಗ ಜಡಿದು, ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು.