<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಹುಗಲೂರು ಗ್ರಾಮದ ಸಂಪರ್ಕ ರಸ್ತೆ ತೀರಾ ಹದಗೆಟ್ಟಿದೆ.</p>.<p>ಮಳೆಗಾಲದಲ್ಲಿ ರಸ್ತೆ ರಾಡಿಮಯವಾಗುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಿದೆ.</p>.<p>ಹೂವಿನಹಡಗಲಿ-ಸೋಗಿ ಮುಖ್ಯ ರಸ್ತೆಯ ಕ್ರಾಸ್ ನಿಂದ ಹುಗಲೂರು ಸಂಪರ್ಕಿಸುವ 3 ಕಿ.ಮೀ. ಉದ್ದದ ಗ್ರಾಮೀಣ ರಸ್ತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೇರಿದೆ. ಬಹು ವರ್ಷಗಳಿಂದ ಈ ರಸ್ತೆ ದುರಸ್ತಿಯನ್ನೇ ಕಂಡಿಲ್ಲ. ರಸ್ತೆಯಲ್ಲಿ ಸಾಕಷ್ಟು ತಗ್ಗು, ಗುಂಡಿಗಳಿದ್ದು ಮಳೆಯ ನೀರು ರಸ್ತೆಯಲ್ಲೇ ನಿಂತು ಅವಾಂತರ ಸೃಷ್ಟಿಯಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆ ಕೆಸರಿನ ಗದ್ದೆಯಾಗಿ ಮಾರ್ಪಡುತ್ತದೆ. ಕೆಸರಿನಲ್ಲಿ ದ್ವಿಚಕ್ರ ವಾಹನಗಳು ನಿಯಂತ್ರಣ ಸಿಗದೇ ಸಾಕಷ್ಟು ಜನರು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಈ ಹಿಂದೆ ಬಸ್ಸುಗಳು ಸಹ ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಇಳಿದ ಉದಾಹರಣೆ ಇವೆ. ಹೀಗಾಗಿ ಗ್ರಾಮದ ಜನರು ಮಳೆಗಾಲದಲ್ಲಿ ಬಸ್ ಹತ್ತಲು ಹಿಂದೇಟು ಹಾಕುತ್ತಾರೆ ಎನ್ನುತ್ತಾರೆ ಗ್ರಾಮಸ್ಥರು.</p>.<p>ರಸ್ತೆ ತೀರಾ ಹದಗೆಟ್ಟಿದ್ದರಿಂದ ಸಾರಿಗೆ ಡಿಪೋದವರು ಕೆಲವು ತಿಂಗಳು ಬಸ್ ಮಾರ್ಗಗಳನ್ನೇ ಸ್ಥಗಿತಗೊಳಿಸಿದ್ದರು. ಶಾಲಾ, ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗ್ರಾಮಸ್ಥರ ಮನವಿ ಮೇರೆಗೆ ಈಗ ಮತ್ತೆ ಬಸ್ ಗಳು ಓಡಾಡುತ್ತಿವೆ.</p>.<p>ಈ ಮಾರ್ಗದಲ್ಲಿ ಮೂರ್ನಾಲ್ಕು ಕಿರು ಸೇತುವೆಗಳಿದ್ದು, ಮಳೆ ಹೆಚ್ಚಾದರೆ ರಸ್ತೆ ಸಂಪರ್ಕ ಕಡಿದುಕೊಳ್ಳುತ್ತದೆ. ಪಟ್ಟಣಕ್ಕೆ ಬಂದು ಹೋಗುವವರು ಸೋಗಿ ಇಲ್ಲವೇ ದೇವಗೊಂಡನಹಳ್ಳಿ ಮಾರ್ಗವಾಗಿ ಸುತ್ತುವರಿದು ಊರು ತಲುಪುವ ಅನಿವಾರ್ಯತೆ ಎದುರಾಗುತ್ತದೆ.</p>.<p>ರಸ್ತೆ ಅಭಿವೃದ್ಧಿಪಡಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ರಸ್ತೆಗಳು ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿಯಾಗಿವೆ. ಬಹುಕಾಲ ದುರಸ್ತಿ ಕಾಣದ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ರಿಪೇರಿಯಾಗಿ ಸಂಚಾರ ವ್ಯವಸ್ಥೆ ಸುಧಾರಣೆ ಕಂಡಿದೆ.</p>.<p>ಇದರಿಂದಾಗಿಯೇ ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಅವರಿಗೆ ಅಭಿಮಾನಿಗಳು ‘ರಸ್ತೆ ರಾಜ’ ಬಿರುದು ನೀಡಿದ್ದಾರೆ. ಆದರೆ ಹುಗಲೂರು ರಸ್ತೆಯ ದುಸ್ಥಿತಿ ಅಭಿಮಾನಿಗಳ ಬಿರುದನ್ನೇ ಅಣಕಿಸುವಂತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.</p>.<p>ಮೂಲೆಕಟ್ಟಿನ ಊರುಗಳ ರಸ್ತೆಗಳನ್ನು ನಿರ್ಲಕ್ಷ್ಯ ಮಾಡದೇ ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಹುಗಲೂರು ರಸ್ತೆ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಹುಗಲೂರು ಗ್ರಾಮದ ಸಂಪರ್ಕ ರಸ್ತೆ ತೀರಾ ಹದಗೆಟ್ಟಿದೆ.</p>.<p>ಮಳೆಗಾಲದಲ್ಲಿ ರಸ್ತೆ ರಾಡಿಮಯವಾಗುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಿದೆ.</p>.<p>ಹೂವಿನಹಡಗಲಿ-ಸೋಗಿ ಮುಖ್ಯ ರಸ್ತೆಯ ಕ್ರಾಸ್ ನಿಂದ ಹುಗಲೂರು ಸಂಪರ್ಕಿಸುವ 3 ಕಿ.ಮೀ. ಉದ್ದದ ಗ್ರಾಮೀಣ ರಸ್ತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೇರಿದೆ. ಬಹು ವರ್ಷಗಳಿಂದ ಈ ರಸ್ತೆ ದುರಸ್ತಿಯನ್ನೇ ಕಂಡಿಲ್ಲ. ರಸ್ತೆಯಲ್ಲಿ ಸಾಕಷ್ಟು ತಗ್ಗು, ಗುಂಡಿಗಳಿದ್ದು ಮಳೆಯ ನೀರು ರಸ್ತೆಯಲ್ಲೇ ನಿಂತು ಅವಾಂತರ ಸೃಷ್ಟಿಯಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆ ಕೆಸರಿನ ಗದ್ದೆಯಾಗಿ ಮಾರ್ಪಡುತ್ತದೆ. ಕೆಸರಿನಲ್ಲಿ ದ್ವಿಚಕ್ರ ವಾಹನಗಳು ನಿಯಂತ್ರಣ ಸಿಗದೇ ಸಾಕಷ್ಟು ಜನರು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಈ ಹಿಂದೆ ಬಸ್ಸುಗಳು ಸಹ ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಇಳಿದ ಉದಾಹರಣೆ ಇವೆ. ಹೀಗಾಗಿ ಗ್ರಾಮದ ಜನರು ಮಳೆಗಾಲದಲ್ಲಿ ಬಸ್ ಹತ್ತಲು ಹಿಂದೇಟು ಹಾಕುತ್ತಾರೆ ಎನ್ನುತ್ತಾರೆ ಗ್ರಾಮಸ್ಥರು.</p>.<p>ರಸ್ತೆ ತೀರಾ ಹದಗೆಟ್ಟಿದ್ದರಿಂದ ಸಾರಿಗೆ ಡಿಪೋದವರು ಕೆಲವು ತಿಂಗಳು ಬಸ್ ಮಾರ್ಗಗಳನ್ನೇ ಸ್ಥಗಿತಗೊಳಿಸಿದ್ದರು. ಶಾಲಾ, ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗ್ರಾಮಸ್ಥರ ಮನವಿ ಮೇರೆಗೆ ಈಗ ಮತ್ತೆ ಬಸ್ ಗಳು ಓಡಾಡುತ್ತಿವೆ.</p>.<p>ಈ ಮಾರ್ಗದಲ್ಲಿ ಮೂರ್ನಾಲ್ಕು ಕಿರು ಸೇತುವೆಗಳಿದ್ದು, ಮಳೆ ಹೆಚ್ಚಾದರೆ ರಸ್ತೆ ಸಂಪರ್ಕ ಕಡಿದುಕೊಳ್ಳುತ್ತದೆ. ಪಟ್ಟಣಕ್ಕೆ ಬಂದು ಹೋಗುವವರು ಸೋಗಿ ಇಲ್ಲವೇ ದೇವಗೊಂಡನಹಳ್ಳಿ ಮಾರ್ಗವಾಗಿ ಸುತ್ತುವರಿದು ಊರು ತಲುಪುವ ಅನಿವಾರ್ಯತೆ ಎದುರಾಗುತ್ತದೆ.</p>.<p>ರಸ್ತೆ ಅಭಿವೃದ್ಧಿಪಡಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ರಸ್ತೆಗಳು ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿಯಾಗಿವೆ. ಬಹುಕಾಲ ದುರಸ್ತಿ ಕಾಣದ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ರಿಪೇರಿಯಾಗಿ ಸಂಚಾರ ವ್ಯವಸ್ಥೆ ಸುಧಾರಣೆ ಕಂಡಿದೆ.</p>.<p>ಇದರಿಂದಾಗಿಯೇ ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಅವರಿಗೆ ಅಭಿಮಾನಿಗಳು ‘ರಸ್ತೆ ರಾಜ’ ಬಿರುದು ನೀಡಿದ್ದಾರೆ. ಆದರೆ ಹುಗಲೂರು ರಸ್ತೆಯ ದುಸ್ಥಿತಿ ಅಭಿಮಾನಿಗಳ ಬಿರುದನ್ನೇ ಅಣಕಿಸುವಂತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.</p>.<p>ಮೂಲೆಕಟ್ಟಿನ ಊರುಗಳ ರಸ್ತೆಗಳನ್ನು ನಿರ್ಲಕ್ಷ್ಯ ಮಾಡದೇ ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಹುಗಲೂರು ರಸ್ತೆ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>