‘40 ಜನರ ತಂಡದೊಂದಿಗೆ ಯರ್ರಿಸ್ವಾಮಿ ಹಾಗೂ ಅವರ ಕುಟುಂಬದವರು ಅಮೆರಿಕ ಪ್ರವಾಸದಿಂದ ಹಿಂತಿರುಗಿದ್ದಾರೆ. ಈಗಾಗಲೇ ವಿಮಾನ ನಿಲ್ದಾಣದಲ್ಲಿಯೇ ಅವರೆಲ್ಲರ ಗಂಟಲಿನ ದ್ರವ ಪಡೆದು ಪರೀಕ್ಷಿಸಲಾಗಿದೆ. ಎಲ್ಲರೂ ಸಹಜವಾಗಿದ್ದಾರೆ ಎಂದು ಗೊತ್ತಾಗಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ವಾರ ಮನೆಯಿಂದ ಹೊರಹೋಗದಂತೆ ತಿಳಿಸಲಾಗಿದೆ. ತಾಲ್ಲೂಕು ಆಡಳಿತದಿಂದಲೂ ಅವರ ಮೇಲೆ ನಿಗಾ ಇಡಲಾಗಿದೆ’ ಎಂದು ತಹಶೀಲ್ದಾರ್ ‘ಪ್ರಜಾವಾಣಿ’ಗೆ ತಿಳಿಸಿದರು.