ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಲೋಕ್ ಪ್ರಹಾರಿ ಎಂಬ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಪೀಠ, ‘ಈ ತಿದ್ದುಪಡಿ ಸೇಚ್ಛಾಚಾರ, ತಾರತಮ್ಯದಿಂದ ಕೂಡಿದೆ. ಅಲ್ಲದೇ, ಇದು ಸಮಾನತೆ ಪ್ರತಿಪಾದಿಸುವ ಸಂವಿಧಾನದ ಆಶಯಕ್ಕೆ ವಿರುದ್ಧವಾದುದು’ ಎಂದು ಸೋಮವಾರ ನೀಡಿದ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.