ಬೆಳಿಗ್ಗೆ ಪೂಜೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮಗಳು ಆರಂಭವಾದವು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಕೇರಂ, ಚೆಸ್, ಮ್ಯೂಸಿಕಲ್ ಚೇರ್, ಬಾಲ್ ಪಾಸಿಂಗ್, ಕಪ್ಪೆ ಓಟ ಸೇರಿದಂತೆ ಇತರೆ ಕ್ರೀಡೆಗಳು ನಡೆದವು. ನಂತರ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದವರನ್ನು ಸತ್ಕರಿಸಲಾಯಿತು.ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಡಾ. ಮೃತ್ಯುಂಜಯ ಆರ್. ವಸ್ತ್ರದ, ಡಾ. ಬಿ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.