ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದಿಂದ ಓಣಂ ಆಚರಣೆ

Last Updated 22 ಸೆಪ್ಟೆಂಬರ್ 2019, 12:43 IST
ಅಕ್ಷರ ಗಾತ್ರ

ಹೊಸಪೇಟೆ: ಓಣಂ ಹಬ್ಬವನ್ನು ಕೇರಳ ಮೂಲದವರು ಭಾನುವಾರ ಇಲ್ಲಿ ಸಡಗರ, ಸಂಭ್ರಮದಿಂದ ಆಚರಿಸಿದರು.

ನಗರದ ವಿವಿಧ ಭಾಗಗಳಲ್ಲಿ ನೆಲೆಸಿರುವ 300ಕ್ಕೂ ಅಧಿಕ ಮಲಯಾಳಿ ಕುಟುಂಬದವರು ಒಂದೆಡೆ ಸಮಾಗಮವಾಗಿ ಸಂಭ್ರಮದಲ್ಲಿ ಭಾಗಿಯಾದರು. ಸಾಂಪ್ರದಾಯಿಕ ಮಲಯಾಳಿ ನೃತ್ಯ, ಆಹಾರ ಉತ್ಸವ ಗಮನ ಸೆಳೆಯಿತು.

ಬೆಳಿಗ್ಗೆ ಪೂಜೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮಗಳು ಆರಂಭವಾದವು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಕೇರಂ, ಚೆಸ್‌, ಮ್ಯೂಸಿಕಲ್‌ ಚೇರ್‌, ಬಾಲ್‌ ಪಾಸಿಂಗ್‌, ಕಪ್ಪೆ ಓಟ ಸೇರಿದಂತೆ ಇತರೆ ಕ್ರೀಡೆಗಳು ನಡೆದವು. ನಂತರ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದವರನ್ನು ಸತ್ಕರಿಸಲಾಯಿತು.ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಡಾ. ಮೃತ್ಯುಂಜಯ ಆರ್‌. ವಸ್ತ್ರದ, ಡಾ. ಬಿ.ಮಂಜುನಾಥ್‌ ಅವರನ್ನು ಸನ್ಮಾನಿಸಲಾಯಿತು.

ಕೈರಾಲಿ ಕಲ್ಚರಲ್‌ ಅಸೋಸಿಯೇಷನ್‌ ಅಧ್ಯಕ್ಷ ಎಂ.ಕೆ. ಮಥಾಯಿ,ಉಪಾಧ್ಯಕ್ಷ ಸಿಲ್ವಿ ಜಾರ್ಜ್‌, ಪ್ರಧಾನ ಕಾರ್ಯದರ್ಶಿ ಸುಂದರನ್‌, ಕೆ. ಮನೋಹರನ್‌ ಪಿಳ್ಳೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT