ಹೂವಿನಹಡಗಲಿ: ಇಲ್ಲಿನ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಲಕ್ಷ್ಯಾನಾಯ್ಕ (66) ಮಂಗಳವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅವರು ಸ್ಕೂಟಿಯಲ್ಲಿ ಹೂವಿನಹಡಗಲಿಗೆ ಬರುತ್ತಿರುವಾಗ ಕೊಂಬಳಿ ಬಳಿ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.