ಪದವಿ, ಸ್ನಾತಕೋತ್ತರ, ಕಾನೂನು, ಡಿಪ್ಲೊಮಾ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ರೀತಿಯ ವೃತ್ತಿಪರ ಕೋರ್ಸ್ಗಳ ಪರೀಕ್ಷೆಗಳನ್ನು ಸರ್ಕಾರ ರದ್ದುಗೊಳಿಸಬೇಕು. ಆರು ತಿಂಗಳ ಶೈಕ್ಷಣಿಕ ಶುಲ್ಕ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಮುಂದಿನ ಆರು ತಿಂಗಳ ವರೆಗೆ ಹತ್ತು ಕೆ.ಜಿ. ಆಹಾರ ಧಾನ್ಯ ನೀಡಬೇಕು. ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರ ಮಾಸಿಕ ₹7,500 ಭತ್ಯೆ ವಿತರಿಸಬೇಕು. ವಿವಿಧ ವಿಶ್ವವಿದ್ಯಾಲಯಗಳು ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿಗಳ ಫೆಲೋಶಿಪ್ ಶೀಘ್ರ ಕೊಡಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.