‘ಅಸ್ಥಿ ವಿಸರ್ಜನೆ, ಪಿಂಡ ಪ್ರದಾನಕ್ಕೆ ಹಂಪಿ ವಿಜಯ ವಿಠಲ ದೇವಸ್ಥಾನ ಹಿಂಭಾಗದ ಸ್ಥಳ ಮೀಸಲಿಡಲಾಗಿದೆ. ಆದರೂ ಕೆಲವರು ಸ್ನಾನಘಟ್ಟದಲ್ಲೇ ಅಂತಿಮ ವಿಧಿ ವಿಧಾನ ನೆರವೇರಿಸಿ, ಅಸ್ಥಿ ವಿಸರ್ಜಿಸುತ್ತಿದ್ದಾರೆ. ಸ್ನಾನಘಟ್ಟದಲ್ಲಿ ನಿತ್ಯ ನೂರಾರು ಜನ ಭಕ್ತರು ಪುಣ್ಯ ಸ್ನಾನ ಮಾಡುತ್ತಾರೆ. ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಸೇರಿದಂತೆ ಇತರೆ ಪುರೋಹಿತರು ಇಲ್ಲೇ ಮಡಿ ಸ್ನಾನ ಮಾಡುತ್ತಾರೆ. ಆದರೆ, ಅಸ್ಥಿ ವಿಸರ್ಜಿಸುತ್ತಿರುವುದರಿಂದ ಇಡೀ ಪರಿಸರ ಮಲಿನವಾಗುತ್ತಿದೆ. ಭಕ್ತರಿಗೂ ಕಿರಿಕಿರಿ ಉಂಟಾಗುತ್ತಿದೆ’ ಎಂದು ತಿಳಿಸಿದ್ದಾರೆ.