ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಜೊತೆ ಚರ್ಚೆ ನಡೆಸಬೇಕು. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಅದನ್ನು ಹೇರಲು ಹೊರಟಿರುವುದು ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿಗೆ ಸರ್ಕಾರ ಸಮಿತಿಯೊಂದನ್ನು ರಚಿಸಿ, ಹತ್ತು ದಿನಗಳಲ್ಲಿಯೇ ವರದಿ ಕೇಳಿರುವುದು ಸರಿಯಾದ ಕ್ರಮವಲ್ಲ. ಸಮಿತಿಯೊಂದಿಗೆ ನಡೆಯುವ ಎಲ್ಲ ರೀತಿಯ ಚರ್ಚೆ, ವರದಿ ಪಾರದರ್ಶಕವಾಗಿರಬೇಕು. ಅದರ ಮಾಹಿತಿ ಎಲ್ಲರಿಗೂ ಸಿಗುವಂತೆ ಮಾಡಬೇಕು. ಎಲ್ಲರಿಗೂ ಹೊಸ ನೀತಿ ಕುರಿತು ಮನವರಿಕೆ ಆಗುವವರೆಗೆ ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಒತ್ತಾಯಿಸಿದ್ದಾರೆ.