<p>ಹೊಸಪೇಟೆ (ವಿಜಯನಗರ): ‘ಮನುಷ್ಯನ ಅಭಿವ್ಯಕ್ತಿಯಲ್ಲಿ ಹಲವು ಪ್ರಕಾರಗಳಿವೆ. ಅದರಲ್ಲಿ ಚಿತ್ರಕಲೆ ಅಭಿವ್ಯಕ್ತಿಯ ಪ್ರಮುಖ ಸಾಧನವಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದರು.</p>.<p>ಸ್ವಾತಂತ್ರ್ಯ ಉತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗ ಮತ್ತು ನಾಗಪುರದ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಭಾಗಿತ್ವದಲ್ಲಿ ಗುರುವಾರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಶಿಲ್ಪಕಲಾ ಹಾಗೂ ಚಿತ್ರಕಲಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಮನುಷ್ಯ ಬರವಣಿಗೆ, ಚಿಂತನೆಗಳ ಮೂಲಕ ಸತ್ಪ್ರಜೆಯಾಗುತ್ತಾನೆ. ಬರವಣಿಗೆ ವಿದ್ಯಾವಂತರಿಗೆ ಅರ್ಥವಾಗುತ್ತದೆ. ಆದರೆ, ಜನಸಾಮಾನ್ಯರು ಚಿತ್ರಕಲೆ ಹಾಗೂ ಶಿಲ್ಪಕಲೆಗಳನ್ನು ನೋಡಿ ಅನೇಕ ವಿಚಾರಗಳನ್ನು ಅರಿತುಕೊಳ್ಳುತ್ತಾರೆ. ಕಲಾವಿದರು ತಮ್ಮ ಭಾವನೆಗಳನ್ನು ಕಲೆಯ ಮೂಲಕ ವ್ಯಕ್ತಪಡಿಸುತ್ತಾರೆ’ ಎಂದು ಹೇಳಿದರು.</p>.<p>‘ಶಾಂತಿ, ನೆಮ್ಮದಿ, ಸಂತೋಷ ಹಾಗೂ ದುಃಖವನ್ನು ವ್ಯಕ್ತಪಡಿಸುವ ಮಹಾನ್ ಶಕ್ತಿ ಕಲೆಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗೋಡೆಗಳ ಮೇಲೆ ಚಿತ್ರಕಲೆಯನ್ನು ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವುದು ಉತ್ತಮ ಕೆಲಸ’ ಎಂದರು.</p>.<p>ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ, ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ. ಪಾಂಚಾಳ, ಪ್ರಾಧ್ಯಾಪಕ ಎಚ್.ಎನ್. ಕೃಷ್ಣೇಗೌಡ, ವಿದ್ಯಾರ್ಥಿ ಶ್ರೀಶೈಲ ಕಂಬಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ‘ಮನುಷ್ಯನ ಅಭಿವ್ಯಕ್ತಿಯಲ್ಲಿ ಹಲವು ಪ್ರಕಾರಗಳಿವೆ. ಅದರಲ್ಲಿ ಚಿತ್ರಕಲೆ ಅಭಿವ್ಯಕ್ತಿಯ ಪ್ರಮುಖ ಸಾಧನವಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದರು.</p>.<p>ಸ್ವಾತಂತ್ರ್ಯ ಉತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗ ಮತ್ತು ನಾಗಪುರದ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಭಾಗಿತ್ವದಲ್ಲಿ ಗುರುವಾರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಶಿಲ್ಪಕಲಾ ಹಾಗೂ ಚಿತ್ರಕಲಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಮನುಷ್ಯ ಬರವಣಿಗೆ, ಚಿಂತನೆಗಳ ಮೂಲಕ ಸತ್ಪ್ರಜೆಯಾಗುತ್ತಾನೆ. ಬರವಣಿಗೆ ವಿದ್ಯಾವಂತರಿಗೆ ಅರ್ಥವಾಗುತ್ತದೆ. ಆದರೆ, ಜನಸಾಮಾನ್ಯರು ಚಿತ್ರಕಲೆ ಹಾಗೂ ಶಿಲ್ಪಕಲೆಗಳನ್ನು ನೋಡಿ ಅನೇಕ ವಿಚಾರಗಳನ್ನು ಅರಿತುಕೊಳ್ಳುತ್ತಾರೆ. ಕಲಾವಿದರು ತಮ್ಮ ಭಾವನೆಗಳನ್ನು ಕಲೆಯ ಮೂಲಕ ವ್ಯಕ್ತಪಡಿಸುತ್ತಾರೆ’ ಎಂದು ಹೇಳಿದರು.</p>.<p>‘ಶಾಂತಿ, ನೆಮ್ಮದಿ, ಸಂತೋಷ ಹಾಗೂ ದುಃಖವನ್ನು ವ್ಯಕ್ತಪಡಿಸುವ ಮಹಾನ್ ಶಕ್ತಿ ಕಲೆಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗೋಡೆಗಳ ಮೇಲೆ ಚಿತ್ರಕಲೆಯನ್ನು ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವುದು ಉತ್ತಮ ಕೆಲಸ’ ಎಂದರು.</p>.<p>ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ, ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ. ಪಾಂಚಾಳ, ಪ್ರಾಧ್ಯಾಪಕ ಎಚ್.ಎನ್. ಕೃಷ್ಣೇಗೌಡ, ವಿದ್ಯಾರ್ಥಿ ಶ್ರೀಶೈಲ ಕಂಬಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>