ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ನಿವಾಸಿ, ಪರಿಸರ ಪ್ರೇಮಿ, ವನ್ಯಜೀವಿ ಛಾಯಾಗ್ರಾಹಕ ಪಂಪಯ್ಯ ಸ್ವಾಮಿ ಮಳೆಮಠ ಅವರನ್ನು ಗೌರವ ವನ್ಯಜೀವಿ ಪರಿಪಾಲಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
‘ಬಳ್ಳಾರಿ ಜಿಲ್ಲೆಯವರೇ ಆದ ಡಾ.ಎಸ್.ಕೆ. ಅರುಣ್, ಡಾ. ಮನೋಹರ್ ಕೂಡ ಗೌರವ ವನ್ಯಜೀವಿ ಪರಿಪಾಲಕರಾಗಿ ನೇಮಕಗೊಂಡಿದ್ದಾರೆ. ಎರಡು ವರ್ಷದ ಅವಧಿ ವರೆಗೆ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.