<p><strong>ಹೊಸಪೇಟೆ: </strong>‘ಗ್ರಾಮ ಪಂಚಾಯಿತಿಯ ನೂತನ ಸದಸ್ಯರು ಅವರ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದೆ’ ಎಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜಿ.ಎಸ್. ಗಣೇಶ್ ಪ್ರಸಾದ್ ತಿಳಿಸಿದರು.</p>.<p>ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಸಹಭಾಗಿತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಂಚಾಯಿತಿ ಸದಸ್ಯರ ಸಾಮರ್ಥ್ಯ ಅಭಿವೃದ್ಧಿ ತರಬೇತಿದಾರರ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಸದಸ್ಯರಿಗೆ ಅವರ ಹಕ್ಕುಗಳಿರುವಂತೆ, ಕರ್ತವ್ಯ ಕೂಡ ಇರುತ್ತದೆ. ಅದನ್ನು ಇಲ್ಲಿ ತರಬೇತಿ ಪಡೆದವರು ಸದಸ್ಯರಿಗೆ ಮನವರಿಕೆ ಮಾಡಿಕೊಡಬೇಕು. ಅದು ಗೊತ್ತಾದರೆ ಪಂಚಾಯಿತಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ’ ಎಂದು ಹೇಳಿದರು.</p>.<p>ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಜನಾರ್ದನ ಮಾತನಾಡಿ, ‘ಪಂಚಾಯಿತಿ ಚುನಾವಣೆಯಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು, ಈ ಹಿಂದೆ ಸದಸ್ಯರಾಗಿ ಕೆಲಸ ನಿರ್ವಹಿಸಿದರು ಪುನಃ ಆಯ್ಕೆಗೊಂಡಿದ್ದಾರೆ. ಅವರಿಗೆ ಅವರ ಭಾಷೆಯಲ್ಲಿಯೇ ಅರ್ಥವಾಗುವಂತೆ ಪಂಚಾಯಿತಿ ಆಡಳಿತದ ಬಗ್ಗೆ ತಿಳಿಸಿಕೊಡಬೇಕು’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂಬಂಧಿಸಿದ ಅನೇಕ ಯೋಜನೆಗಳ ಮಾದರಿಗಳನ್ನು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗವು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಅವುಗಳಲ್ಲಿ ಕೆಲವೊಂದು ಯೋಜನೆಗಳನ್ನು ನೇರವಾಗಿ ಸರ್ಕಾರವು ಅನುಷ್ಠಾನಗೊಳಿಸಿದೆ’ ಎಂದರು.</p>.<p>ತರಬೇತಿ ಕಾರ್ಯಾಗಾರದ ಸಂಚಾಲಕ ಎಚ್.ಡಿ. ಪ್ರಶಾಂತ್ ಮಾತನಾಡಿ, ‘ಸಮಯ ಪ್ರಜ್ಞೆ ಜೀವನದಲ್ಲಿ ಬಹಳ ಅವಶ್ಯಕ. ಅದನ್ನು ಮನಗಂಡು ಕೆಲಸ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಬೋಧಕರಾದ ಮಲ್ಲಿಕಾರ್ಜುನ್, ಶಿವಪುತ್ರಪ್ಪ, ಲಾರೆನ್ಸ್, ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ಶ್ರೀಧರ, ಶಿವಾನಂದ ವಿರಕ್ತಮಠ, ಲೋಕೇಶ್ ಬ್ಯಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>‘ಗ್ರಾಮ ಪಂಚಾಯಿತಿಯ ನೂತನ ಸದಸ್ಯರು ಅವರ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದೆ’ ಎಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜಿ.ಎಸ್. ಗಣೇಶ್ ಪ್ರಸಾದ್ ತಿಳಿಸಿದರು.</p>.<p>ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಸಹಭಾಗಿತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಂಚಾಯಿತಿ ಸದಸ್ಯರ ಸಾಮರ್ಥ್ಯ ಅಭಿವೃದ್ಧಿ ತರಬೇತಿದಾರರ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಸದಸ್ಯರಿಗೆ ಅವರ ಹಕ್ಕುಗಳಿರುವಂತೆ, ಕರ್ತವ್ಯ ಕೂಡ ಇರುತ್ತದೆ. ಅದನ್ನು ಇಲ್ಲಿ ತರಬೇತಿ ಪಡೆದವರು ಸದಸ್ಯರಿಗೆ ಮನವರಿಕೆ ಮಾಡಿಕೊಡಬೇಕು. ಅದು ಗೊತ್ತಾದರೆ ಪಂಚಾಯಿತಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ’ ಎಂದು ಹೇಳಿದರು.</p>.<p>ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಜನಾರ್ದನ ಮಾತನಾಡಿ, ‘ಪಂಚಾಯಿತಿ ಚುನಾವಣೆಯಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು, ಈ ಹಿಂದೆ ಸದಸ್ಯರಾಗಿ ಕೆಲಸ ನಿರ್ವಹಿಸಿದರು ಪುನಃ ಆಯ್ಕೆಗೊಂಡಿದ್ದಾರೆ. ಅವರಿಗೆ ಅವರ ಭಾಷೆಯಲ್ಲಿಯೇ ಅರ್ಥವಾಗುವಂತೆ ಪಂಚಾಯಿತಿ ಆಡಳಿತದ ಬಗ್ಗೆ ತಿಳಿಸಿಕೊಡಬೇಕು’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂಬಂಧಿಸಿದ ಅನೇಕ ಯೋಜನೆಗಳ ಮಾದರಿಗಳನ್ನು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗವು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ಅವುಗಳಲ್ಲಿ ಕೆಲವೊಂದು ಯೋಜನೆಗಳನ್ನು ನೇರವಾಗಿ ಸರ್ಕಾರವು ಅನುಷ್ಠಾನಗೊಳಿಸಿದೆ’ ಎಂದರು.</p>.<p>ತರಬೇತಿ ಕಾರ್ಯಾಗಾರದ ಸಂಚಾಲಕ ಎಚ್.ಡಿ. ಪ್ರಶಾಂತ್ ಮಾತನಾಡಿ, ‘ಸಮಯ ಪ್ರಜ್ಞೆ ಜೀವನದಲ್ಲಿ ಬಹಳ ಅವಶ್ಯಕ. ಅದನ್ನು ಮನಗಂಡು ಕೆಲಸ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಬೋಧಕರಾದ ಮಲ್ಲಿಕಾರ್ಜುನ್, ಶಿವಪುತ್ರಪ್ಪ, ಲಾರೆನ್ಸ್, ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ಶ್ರೀಧರ, ಶಿವಾನಂದ ವಿರಕ್ತಮಠ, ಲೋಕೇಶ್ ಬ್ಯಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>