‘ಸಾಹಿತ್ಯ ಪರಿಷತ್ತು ಜನಪರ ಆಗಬೇಕು ಎನ್ನುವುದು ನನ್ನ ಬಯಕೆ. ಒಂದುವೇಳೆ ಬರುವ ಚುನಾವಣೆಯಲ್ಲಿ ನಾನು ಗೆದ್ದರೆ, ಪರಿಷತ್ತಿನ ಸದಸ್ಯತ್ವದ ಶುಲ್ಕ ₹500ರಿಂದ ₹250ಕ್ಕೆ ಇಳಿಸುವೆ. ಯುವಕರ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಕಾರ್ಯಕ್ರಮ ರೂಪಿಸುವೆ. ಶಾಲಾ, ಕಾಲೇಜುಗಳಲ್ಲಿ ಕನ್ನಡ ಕಾರ್ಯಕ್ರಮ ಸಂಘಟಿಸುವೆ. ಆ್ಯಪ್ ಮೂಲಕ ಸದಸ್ಯತ್ವ ಪಡೆಯುವುದು, ಸ್ಮಾರ್ಟ್ ಕಾರ್ಡ್ ಪರಿಚಯಿಸಲಾಗುವುದು. ಸರ್ಕಾರಿ ಶಾಲೆಗಳನ್ನು ಉಳಿಸಲು ಶ್ರಮಿಸುವೆ’ ಎಂದು ತಿಳಿಸಿದರು.