ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: 15.50 ಕ್ವಿಂಟಲ್‌ ಪಡಿತರ ಅಕ್ಕಿ ವಶ

Last Updated 5 ಆಗಸ್ಟ್ 2021, 15:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಭುವನೇಶ್ವರಿ ನಗರದ ಮೂರನೇ ಅಡ್ಡರಸ್ತೆಯಲ್ಲಿ ಅಮಾನುಲ್ಲಾ ಎಂಬುವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 15.50 ಕ್ವಿಂಟಲ್‌ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಅಕ್ರಮ ದಾಸ್ತಾನು ಮಾಡಿದ್ದ ಅಮಾನುಲ್ಲಾ ವಿರುದ್ಧ ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ ಅಡಿ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಇನ್‌ಸ್ಪೆಕ್ಟರ್‌ ಆರ್‌. ಅಜಿತ್‌ ಕುಮಾರ್‌, ಶಿರಸ್ತೇದಾರ ಎಚ್‌. ನಾಗರಾಜ್‌, ಎಎಸ್‌ಐ ಕುಮಾರ್, ಕಾನ್‌ಸ್ಟೆಬಲ್‌ ಪಿ.ಸಿ. ನಾಗರಾಜ್‌, ಗ್ರಾಮ ಸಹಾಯಕ ಮೋಹನ್‌, ಮಂಜುನಾಥ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT