ಯಡಿಯೂರಪ್ಪ ಅವರ ಸೂಚನೆಯಂತೆ ಸೊರಬದಿಂದ ಸಾಗರದತ್ತ ಮುಖ ಮಾಡಿದ್ದ ಹರತಾಳು ಹಾಲಪ್ಪ ಅವರಿಗೆ ಪಕ್ಷ ಮೋಸ ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ರಾಜಕೀಯದಲ್ಲಿ ಎಲ್ಲವೂ ಸಹಜ. ಇರುವ ಸಣ್ಣಪುಟ್ಟ ವ್ಯತ್ಯಾಸ ಸರಿಪಡಿಸಿಕೊಳ್ಳಲಾಗುವುದು. ಹರತಾಳು ಅವರಿಗೆ ಟಿಕೆಟ್ ಕೈತಪ್ಪಿದರೆ ಯಾರಿಗೂ ಮುಖಭಂಗ ಆಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.