ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತುಂಗಭದ್ರಾ ಜಲಾಶಯದಲ್ಲಿ ಹೂಳು ತೆಗೆಯಲು ಬಿಡಿ’

Last Updated 15 ಮೇ 2019, 13:04 IST
ಅಕ್ಷರ ಗಾತ್ರ

ಹೊಸಪೇಟೆ: ‘ತುಂಗಭದ್ರಾ ಜಲಾಶಯದಲ್ಲಿ ತುಂಬಿಕೊಂಡಿರುವ ಹೂಳು ತೆಗೆಯಲು ಆಡಳಿತ ಮಂಡಳಿ ಅನುಮತಿ ನೀಡಬೇಕು’ ಎಂದು ತುಂಗಭದ್ರಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

‘ಸತತ ಎರಡು ವರ್ಷಗಳಿಂದ ಅಣೆಕಟ್ಟೆಯಿಂದ ಹೂಳು ತೆಗೆದು ರೈತರ ಜಮೀನುಗಳಿಗೆ ಹಾಕುತ್ತಿದ್ದೇವೆ. ಈ ಕೆಲಸಕ್ಕೆ ಜಿಲ್ಲೆಯ ವಿವಿಧ ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಮುಖಂಡರು, ರೈತರು ಸಹಕಾರ ಕೊಟ್ಟಿದ್ದಾರೆ. ಈ ವರ್ಷ ಕೂಡ ಹೂಳು ತೆಗೆಯಲು ಅನುಮತಿ ಕೊಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT