ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

Last Updated 20 ಮಾರ್ಚ್ 2020, 13:49 IST
ಅಕ್ಷರ ಗಾತ್ರ

ಹೊಸಪೇಟೆ: ‘ಭಾನುವಾರದ (ಮಾ.22) ‘ಜನತಾ ಕರ್ಫ್ಯೂ’ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಬಳ್ಳಾರಿ ಜಿಲ್ಲೆಯ ಎಲ್ಲಾ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ವಿತರಿಸದಿರಲು ತೀರ್ಮಾನಿಸಲಾಗಿದೆ’ ಎಂದು ಬಳ್ಳಾರಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕೋತಂಬ್ರಿ ತಿಳಿಸಿದ್ದಾರೆ.

‘ಆದರೆ, ಆ ದಿನ ತುರ್ತು ಸೇವೆಗಳಾದ ಆಂಬ್ಯುಲೆನ್ಸ್, ಪೊಲೀಸ್, ಅಗ್ನಿಶಾಮಕ ದಳ ಹಾಗೂ ಸರ್ಕಾರಿ ಕಚೇರಿಗಳ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಎಂದಿನಂತೆ ಪೂರೈಸಲು ಎಲ್ಲಾ ಬಂಕ್‌ಗಳಲ್ಲಿ ಒಬ್ಬರನ್ನು ಮಾತ್ರ ನಿಯೋಜಿಸಲಾಗುವುದು. ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಇದು ಮಹತ್ವದ್ದಾಗಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT