‘ತೈಲ ದರ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಪೆಟ್ರೋಲ್ ಬಂಕ್ ಮಾಲೀಕರೂ ಕೂಡ ಹೆಚ್ಚಿನ ಬಂಡವಾಳ ಹಾಕಬೇಕಾಗುತ್ತದೆ. ಬೆಲೆ ಹೆಚ್ಚಳದಿಂದ ಪರೋಕ್ಷ, ಅಪರೋಕ್ಷವಾಗಿ ಎಲ್ಲ ವಲಯದವರಿಗೂ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ. ಸರ್ಕಾರ ಕೂಡಲೇ ತೆರಿಗೆ ಕಡಿತ ಮಾಡಿ, ಬೆಲೆ ಇಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪೆಟ್ರೋಲ್ ಪಂಪ್ ಸಂಘದ ಕಾರ್ಯದರ್ಶಿ ಅಶ್ವಿನ್ ಕೊತಂಬ್ರಿ ತಿಳಿಸಿದ್ದಾರೆ.