ವಿಜಯ ವಿಠಲ ದೇವಸ್ಥಾನದ ಸಪ್ತಸ್ವರ ಮಂಟಪ, ಕಮಲ ಮಹಲ್ ಹಾಗೂ ಮಹಾನವಮಿ ದಿಬ್ಬ ಬಳಿಯಿರುವ ಪುಷ್ಕರಣಿಯಂಥ ಸಂರಕ್ಷಿತ ಸ್ಮಾರಕಗಳಲ್ಲಿ ಚಿತ್ರ ತೆಗೆಯಲಾಗಿದೆ. ಮಕ್ಕಳು ಸೇರಿದಂತೆ ಯಾರಿಗೂ ಸ್ಮಾರಕದ ಒಳಗಡೆ ಪ್ರವೇಶವಿಲ್ಲ. ಸಪ್ತಸ್ವರ ಹೊರಹೊಮ್ಮಿಸುವ ಕಂಬಗಳನ್ನು ಯಾರೂ ಮುಟ್ಟುವಂತಿಲ್ಲ. ಆದರೆ, ಕಂಬಗಳನ್ನು ಹಿಡಿದುಕೊಂಡು ಚಿತ್ರೀಕರಣ ನಡೆಸಲು ಅವಕಾಶ ಕಲ್ಪಿಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.