ಹೊಸಪೇಟೆ(ವಿಜಯನಗರ): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆರ್ಬಿಎಸ್ಎಸ್ಎನ್, ಎಸ್ಐಒಎಂ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಹಭಾಗಿತ್ವದಲ್ಲಿ ಸೋಮವಾರ ಕಾರಿಗನೂರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಂತರ ಆಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಪೌಷ್ಟಿಕ ಆಹಾರ ಬಳಕೆಯ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಅವರ ಆರೋಗ್ಯ ತಪಾಸಣೆ ಮಾಡಲಾಯಿತು. ಸಂಸ್ಥೆಯ ಹಿರಿಯ ಸಹಾಯಕ ವ್ಯವಸ್ಥಾಪಕ ಗೋಪಾಲ ಜೋಷಿ, ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ವೈದ್ಯರಾದ ಡಾ.ಗೌತಮ್, ಡಾ.ರಾಘವೇಂದ್ರ ಕಟ್ಟಿ ಇದ್ದರು.