ಹೊಸಪೇಟೆ (ವಿಜಯನಗರ): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮ ದಿನವನ್ನು ಬಿಜೆಪಿ ಪಕ್ಷದಿಂದ ಶುಕ್ರವಾರ ನಗರದಲ್ಲಿ ಆಚರಿಸಲಾಯಿತು.
ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಉದ್ಘಾಟಿಸಿದರು. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ ಕಾರ್ಯಕರ್ತರು ರಕ್ತದಾನ ಮಾಡಿದರು. ತರಕಾರಿ ಮಾರುಕಟ್ಟೆ, ಆಸ್ಪತ್ರೆ, ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಹಂಚಿ ಮೋದಿಯವರ ಕೆಲಸಗಳನ್ನು ಪರಿಚಯಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ, ಕಾರ್ಯಕರ್ತರು ಇದ್ದರು.