ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಇಲ್ಲಿನ ಅನಂತಶಯನಗುಡಿಯ ನಿವಾಸಿ, ಆಟೊ ಚಾಲಕ ಹುಲುಗಪ್ಪ ಹನುಮಂತಪ್ಪ (22), ಮುನೀರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಚಪ್ಪರದಹಳ್ಳಿಯ ನಿವಾಸಿ ಆಸಿಫ್ ಸತ್ತಾರ್ ಸಾಬ್ (28) ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ₹44,000 ಮೌಲ್ಯದ 10 ಗ್ರಾಂ ಬಂಗಾರದ ನಾಣ್ಯ ಮತ್ತು ₹15,80,000 ನಗದು ವಶಪಡಿಸಿಕೊಂಡಿದ್ದಾರೆ.