ತಾಲ್ಲೂಕಿನ ಕಮಲಾಪುರದ ನಿವಾಸಿ ರುದ್ರೇಶ್ (27) ಎಂಬಾತನನ್ನು ಹಲ್ಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದು, ಮಂಗಳವಾರ ರಾತ್ರಿ ನಗರದ ಉಪ ಕಾರಾಗೃಹದಲ್ಲಿ ಇಡಲು ಕರೆತಂದಿದ್ದರು. ಕಾರಾಗೃಹದ ಬಳಿ ಪೊಲೀಸರನ್ನು ತಳ್ಳಿ, ಅಲ್ಲಿಂದ ಕಾಲ್ಕಿತ್ತಿದ್ದ. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಬುಧವಾರ ಮಧ್ಯಾಹ್ನ ಆತನನ್ನು ವಶಕ್ಕೆ ಪಡೆದಿದ್ದಾರೆ.