ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ದಂಧೆ ಅಕ್ರಮದಲ್ಲಿ ಪೊಲೀಸರು ಭಾಗಿ: ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಆರೋಪ

ಕ್ರಮಕ್ಕೆ ಶಾಸಕ ಆಗ್ರಹ
Last Updated 9 ಸೆಪ್ಟೆಂಬರ್ 2020, 1:21 IST
ಅಕ್ಷರ ಗಾತ್ರ

ಹೂವಿನಹಡಗಲಿ: ‘ತಾಲ್ಲೂಕಿನ ತುಂಗಭದ್ರಾ ನದಿ ತೀರದಲ್ಲಿ ನಡೆದಿರುವ ಮರಳು ಅಕ್ರಮ ದಂಧೆಯಲ್ಲಿ ಸ್ಥಳೀಯ ಪೊಲೀಸರೂ ಭಾಗಿಯಾಗಿದ್ದು, ಮೇಲೆ ಕ್ರಮ ಜರುಗಿಸಬೇಕು’ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಆಗ್ರಹಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮರಳು ಸಾಗಣೆದಾರರು ಸ್ಟಾಕ್ ಯಾರ್ಡ್‌ನಲ್ಲಿ ಒಂದು ಪಾಸ್ ಪಡೆದು ಪೊಲೀಸರ ಅಭಯದಿಂದ ನಾಲ್ಕೈದು ಬಾರಿ ಮರಳು ತುಂಬಿ ಸಾಗಿಸುತ್ತಿದ್ದಾರೆ. ತಹಶೀಲ್ದಾರ್ ವಿರುದ್ಧ ಕ್ರಮ ಜರುಗಿಸಿದ ಮಾದರಿಯಲ್ಲೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುವವರ ಮೇಲೆ ಕ್ರಮ ಕೈಗೊಳ್ಳದ ಪೊಲೀಸರು, ಮನೆ ದುರಸ್ತಿ, ಶೌಚಾಲಯ ಕಟ್ಟಿಕೊಳ್ಳಲು ಎತ್ತಿನ ಬಂಡಿಯಲ್ಲಿ ಮರಳು ಕೊಂಡೊಯ್ಯುವ ಅಮಾಯಕರನ್ನು ಬೆದರಿಸಿ ಕೇಸ್ ಹಾಕುತ್ತಿದ್ದಾರೆ’ ಎಂದು ಆರೋಪಿಸಿದರು.

‘ಐಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜುಲೈನಲ್ಲಿ ಪತ್ರ ಬರೆದಿರುವೆ. ಜಿಲ್ಲಾಧಿಕಾರಿ, ಎಸ್ಪಿಗೆ ಮೌಖಿಕವಾಗಿ ತಿಳಿಸಿರುವೆ. ಈವರೆಗೂ ಕ್ರಮ ಕೈಗೊಂಡಿಲ್ಲ. ಕ್ರಮ ಜರುಗಿಸದೆ ನಿರ್ಲಕ್ಷಿಸಿದಲ್ಲಿ ಕಾಂಗ್ರೆಸ್ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಮುಖಂಡರಾದ ಐಗೋಳ ಚಿದಾನಂದ, ಎಂ.ಪರಮೇಶ್ವರಪ್ಪ, ಅಟವಾಳಗಿ ಕೊಟ್ರೇಶ, ಜ್ಯೋತಿ ಮಲ್ಲಣ್ಣ, ಸೋಗಿ ಹಾಲೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT