<p><strong>ಹೊಸಪೇಟೆ (ವಿಜಯನಗರ):</strong> ಇಲ್ಲಿನ ಪಟ್ಟಣ ಠಾಣೆ ಪೊಲೀಸರು ಎರಡೇ ದಿನಗಳಲ್ಲಿ ಮನೆ ಕಳವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕೌಲ್ಪೇಟೆಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಭಾನುವಾರ ಇಬ್ಬರನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ನಗರದ ಅಗಸರ ಓಣಿಯ ಆನಂದ ಪರಸಪ್ಪ (28), ಚಪ್ಪರದಹಳ್ಳಿಯ ಗೋವಿಂದ ಹೊನ್ನೂರಪ್ಪ (33) ನ್ಯಾಯಾಂಗ ಬಂಧನಕ್ಕೆ ಒಳಗಾದವರು. ಆರೋಪಿಗಳಿಂದ ₹28,000 ಮೌಲ್ಯದ ಬೆಳ್ಳಿ ಕಡಗ, ಚೈನು ಹಾಗೂ ಕೃತ್ಯಕ್ಕೆ ಬಳಸಿದ ರಾಡ್ ವಶಪಡಿಸಿಕೊಂಡಿದ್ದಾರೆ.</p>.<p><strong>ಘಟನೆ ಹಿನ್ನೆಲೆ:</strong></p>.<p>ಜು. 16ರಂದು ನಸುಕಿನ ಜಾವ ಕೌಲ್ಪೇಟೆಯ ಮಟನ್ ಮಾರುಕಟ್ಟೆಯಲ್ಲಿನ ದಾದಾ ಕಲಂದರ್ ಅವರ ಮನೆಯ ಬೀಗ ಮುರಿದು ಕಳವು ಮಾಡಿದ್ದರು. ಈ ಕುರಿತು ಜು. 17ರಂದು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಡಿವೈಎಸ್ಪಿ ವಿ. ರಘುಕುಮಾರ, ಪೊಲೀಸ್ ಇನ್ಸ್ಪೆಕ್ಟರ್ ಎಂ. ಶ್ರೀನಿವಾಸ್ ರಾವ್, ಎಎಸ್ಐ ಕೋದಂಡಪಾಣಿ, ಕಾನ್ಸ್ಟೆಬಲ್ಗಳಾದ ಕೆ. ಶ್ರೀನಿವಾಸ, ಸಣ್ಣ ಗಾಳೆಪ್ಪ, ನಿಂಗರಾಜ್, ಅಡಿವೆಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಇಲ್ಲಿನ ಪಟ್ಟಣ ಠಾಣೆ ಪೊಲೀಸರು ಎರಡೇ ದಿನಗಳಲ್ಲಿ ಮನೆ ಕಳವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕೌಲ್ಪೇಟೆಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಭಾನುವಾರ ಇಬ್ಬರನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ನಗರದ ಅಗಸರ ಓಣಿಯ ಆನಂದ ಪರಸಪ್ಪ (28), ಚಪ್ಪರದಹಳ್ಳಿಯ ಗೋವಿಂದ ಹೊನ್ನೂರಪ್ಪ (33) ನ್ಯಾಯಾಂಗ ಬಂಧನಕ್ಕೆ ಒಳಗಾದವರು. ಆರೋಪಿಗಳಿಂದ ₹28,000 ಮೌಲ್ಯದ ಬೆಳ್ಳಿ ಕಡಗ, ಚೈನು ಹಾಗೂ ಕೃತ್ಯಕ್ಕೆ ಬಳಸಿದ ರಾಡ್ ವಶಪಡಿಸಿಕೊಂಡಿದ್ದಾರೆ.</p>.<p><strong>ಘಟನೆ ಹಿನ್ನೆಲೆ:</strong></p>.<p>ಜು. 16ರಂದು ನಸುಕಿನ ಜಾವ ಕೌಲ್ಪೇಟೆಯ ಮಟನ್ ಮಾರುಕಟ್ಟೆಯಲ್ಲಿನ ದಾದಾ ಕಲಂದರ್ ಅವರ ಮನೆಯ ಬೀಗ ಮುರಿದು ಕಳವು ಮಾಡಿದ್ದರು. ಈ ಕುರಿತು ಜು. 17ರಂದು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಡಿವೈಎಸ್ಪಿ ವಿ. ರಘುಕುಮಾರ, ಪೊಲೀಸ್ ಇನ್ಸ್ಪೆಕ್ಟರ್ ಎಂ. ಶ್ರೀನಿವಾಸ್ ರಾವ್, ಎಎಸ್ಐ ಕೋದಂಡಪಾಣಿ, ಕಾನ್ಸ್ಟೆಬಲ್ಗಳಾದ ಕೆ. ಶ್ರೀನಿವಾಸ, ಸಣ್ಣ ಗಾಳೆಪ್ಪ, ನಿಂಗರಾಜ್, ಅಡಿವೆಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>