ಅಮೃತ ಯೋಜನೆ, ಜಿಲ್ಲಾ ಪಂಚಾಯಿತಿ ಅನುದಾನ, ಎಸ್.ಎಫ್.ಸಿ. ಎ.ಡಿ.ಬಿ. ಯೋಜನೆಯಡಿ ನೂರಾರು ಕೋಟಿ ರೂಪಾಯಿಯ ಕಾಮಗಾರಿಗಳು ನಡೆಯುತ್ತಿವೆ. ಅದರಲ್ಲೂ ಸಿ.ಸಿ. ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ ಪ್ರಗತಿಯಲ್ಲಿವೆ. ಆದರೆ, ಇತ್ತೀಚೆಗೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಚರಂಡಿಗಳು ಉಕ್ಕಿ ಹರಿದಿವೆ. ಇದು ಕಳಪೆ ಕಾಮಗಾರಿಗೆ ಸಾಕ್ಷಿ ಎಂದು ಆರೋಪಿಸಿದ್ದಾರೆ.