<p><strong>ಕೊಟ್ಟೂರು: </strong>‘ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಸ್ಥಗಿತಗೊಂಡಿರುವ ಕೊಳವೆ ಬಾವಿಗಳಿಗೆ ಕೋಟಿ ರೂಪಾಯಿಗೂ ಅಧಿಕ ವಿದ್ಯುತ್ ಬಿಲ್ ಬಂದಿದೆ. ಒಂದೊಂದು ಪಂಚಾಯಿತಿಯಲ್ಲಿ ಇಷ್ಟೊಂದು ಹಣ ಬಾಕಿ ಇದ್ದರೆ ಅದನ್ನು ಪಾವತಿಸುವುದು ಹೇಗೆ’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಾನಭೋಗರ ಗುರುಮೂರ್ತಿ ಜೇಸ್ಕಾಂ ಅಧಿಕಾರಿಗಳಿಗೆ ಪ್ರಶ್ನಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ವಿವಿಧ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಸ್ತಾಪಿಸಿದರು.</p>.<p>ಜೆಸ್ಕಾಂ ಜೆಇ ಕೊಟ್ರಪ್ಪ, ‘ಸ್ಥಗಿತಗೊಂಡಿರುವ ಕೊಳವೆ ಬಾವಿಗಳ ಆರ್ಆರ್ ಸಂಖ್ಯೆ ನೀಡಬೇಕು. ವಿದ್ಯುತ್ ಸರಬರಾಜು ನಿಲ್ಲಿಸುವಂತೆ ಮಾಹಿತಿ ನೀಡದ ಕಾರಣ ಈ ರೀತಿಯಾಗಿದೆ. ಕೆಲವು ಪಂಚಾಯಿತಿಯವರು ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದಾರೆ. ಬಿಲ್ ಪಾವತಿಸುವುದು ಅನಿವಾರ್ಯ’ ಎಂದು ಹೇಳಿದರು.</p>.<p>ಹಣ ಬಾಕಿ ಇರುವ ಪ್ರಕರಣಕ್ಕೆ ಪಿಡಿಒ ಹಾಗೂ ಜೆಸ್ಕಾಂ ಅಧಿಕಾರಿಗಳನ್ನು ಹೊಣೆಯಾಸುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ನಾಯ್ಕ ಒತ್ತಾಯಿಸಿದರು.</p>.<p>ಸ್ಥಗಿತಗೊಂಡ ಕೊಳವೆ ಬಾವಿಗಳ ಮಾಹಿತಿಯನ್ನು ಜೆಸ್ಕಾಂಗೆ ನೀಡುವಂತೆ ಜಿಲ್ಲಾ ಪಂಚಾಯ್ತಿಸಿಇಒ ತಿಳಿಸಿ 6 ತಿಂಗಳಾದರೂ ಪಿಡಿಒಗಳು ಏಕೆ ನೀಡಿಲ್ಲ ಎಂದು ತಾಲ್ಲೂಕು ಪಂಚಾಯ್ತಿ ಇಒ ವಿಶ್ವನಾಥ ತರಾಟೆಗೆ ತೆಗೆದುಕೊಂಡರು.</p>.<p>‘ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಡಾ.ಅಂಬೇಡ್ಕರ್ ಭವನ ಮಂಜೂರಾ<br />ಗಿದೆ. ಸುಂಕದಕಲ್ಲು, ತೂಲಹಳ್ಳಿ ಪಂಚಾಯಿತಿಯವರು ಜಾಗ ನೀಡ<br />ಬೇಕಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಜಗದೀಶ್ ಮಾಹಿತಿ ನೀಡಿದರು. ಜಾಗ ನೀಡಲು ಕೆಲವರು ಆಕ್ಷೇಪ ಎತ್ತಿದ್ದಾರೆ ಎಂದು ಪಿಡಿಒಗಳು ಮಾಹಿತಿ ನೀಡದರು.</p>.<p>ರಾಂಪುರದಲ್ಲಿ ಜಾಗ ಇದ್ದರೂ ನಿರ್ಮಾಣಕ್ಕೆ ಮುಂದಾಗದ ಕುರಿತು, ಭೂಮಿ ಪೂಜೆಗೆ ಶಾಸಕರ ದಿನಾಂಕ ಸಿಕ್ಕಿಲ್ಲ ಎಂದು ಕೆ.ಆರ್.ಐ.ಡಿ.ಬಿ.ನ ಚಂದ್ರಾನಾಯ್ಕ ಪ್ರತಿಕ್ರಿಯಿಸಿದರು.</p>.<p>‘ಒಂದೆರಡು ದಿನಗಳಲ್ಲಿ ಶಾಸಕರ ದಿನಾಂಕ ನಿಗದಿ ಮಾಡಬೇಕು. ಇಲ್ಲ<br />ವಾದಲ್ಲಿ ಕಾಮಗಾರಿ ಪ್ರಾರಂಭಿಸಬೇಕು’ ಎಂದು ಸಚಿಸಲಾಯಿತು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಸಭೆಗೆ ಗೈರಾಗಿದ್ದರು. ಅವರ ಪರವಾಗಿ ಹಾಜರಿದ್ದ ಗಾರ್ಡ್, ಪ್ರಗತಿ ಬಗ್ಗೆ ಸರಿಯಾದ ಮಾಹಿತಿ ನೀಡಲಿಲ್ಲ.</p>.<p>ತಾಲ್ಲೂಕು ವೈದ್ಯಾಧಿಕಾರಿ ಷಣ್ಮುಖನಾಯ್ಕ, ಕೃಷಿ ಸಹಾಯಕ ಶ್ಯಾಂ ಸುಂದರ್, ಬಿಇಒ ಉಮಾದೇವಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನಾ ಇಲಾಖೆ, ಕಂದಾಯ ಮತ್ತಿತರ ಇಲಾಖೆ ಅಧಿಕಾರಿಗಳು ವರದಿ ನೀಡಿದರು. ಉಪಾಧ್ಯಕ್ಷೆ ಮಮತಾ ನಾಗರಾಜ ಇದ್ದರು.</p>.<p>ಸಭೆಗೆ ಗೈರಾಗಿದ್ದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಿರ್ಣಯ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು: </strong>‘ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಸ್ಥಗಿತಗೊಂಡಿರುವ ಕೊಳವೆ ಬಾವಿಗಳಿಗೆ ಕೋಟಿ ರೂಪಾಯಿಗೂ ಅಧಿಕ ವಿದ್ಯುತ್ ಬಿಲ್ ಬಂದಿದೆ. ಒಂದೊಂದು ಪಂಚಾಯಿತಿಯಲ್ಲಿ ಇಷ್ಟೊಂದು ಹಣ ಬಾಕಿ ಇದ್ದರೆ ಅದನ್ನು ಪಾವತಿಸುವುದು ಹೇಗೆ’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಾನಭೋಗರ ಗುರುಮೂರ್ತಿ ಜೇಸ್ಕಾಂ ಅಧಿಕಾರಿಗಳಿಗೆ ಪ್ರಶ್ನಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ವಿವಿಧ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಸ್ತಾಪಿಸಿದರು.</p>.<p>ಜೆಸ್ಕಾಂ ಜೆಇ ಕೊಟ್ರಪ್ಪ, ‘ಸ್ಥಗಿತಗೊಂಡಿರುವ ಕೊಳವೆ ಬಾವಿಗಳ ಆರ್ಆರ್ ಸಂಖ್ಯೆ ನೀಡಬೇಕು. ವಿದ್ಯುತ್ ಸರಬರಾಜು ನಿಲ್ಲಿಸುವಂತೆ ಮಾಹಿತಿ ನೀಡದ ಕಾರಣ ಈ ರೀತಿಯಾಗಿದೆ. ಕೆಲವು ಪಂಚಾಯಿತಿಯವರು ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದಾರೆ. ಬಿಲ್ ಪಾವತಿಸುವುದು ಅನಿವಾರ್ಯ’ ಎಂದು ಹೇಳಿದರು.</p>.<p>ಹಣ ಬಾಕಿ ಇರುವ ಪ್ರಕರಣಕ್ಕೆ ಪಿಡಿಒ ಹಾಗೂ ಜೆಸ್ಕಾಂ ಅಧಿಕಾರಿಗಳನ್ನು ಹೊಣೆಯಾಸುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ನಾಯ್ಕ ಒತ್ತಾಯಿಸಿದರು.</p>.<p>ಸ್ಥಗಿತಗೊಂಡ ಕೊಳವೆ ಬಾವಿಗಳ ಮಾಹಿತಿಯನ್ನು ಜೆಸ್ಕಾಂಗೆ ನೀಡುವಂತೆ ಜಿಲ್ಲಾ ಪಂಚಾಯ್ತಿಸಿಇಒ ತಿಳಿಸಿ 6 ತಿಂಗಳಾದರೂ ಪಿಡಿಒಗಳು ಏಕೆ ನೀಡಿಲ್ಲ ಎಂದು ತಾಲ್ಲೂಕು ಪಂಚಾಯ್ತಿ ಇಒ ವಿಶ್ವನಾಥ ತರಾಟೆಗೆ ತೆಗೆದುಕೊಂಡರು.</p>.<p>‘ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಡಾ.ಅಂಬೇಡ್ಕರ್ ಭವನ ಮಂಜೂರಾ<br />ಗಿದೆ. ಸುಂಕದಕಲ್ಲು, ತೂಲಹಳ್ಳಿ ಪಂಚಾಯಿತಿಯವರು ಜಾಗ ನೀಡ<br />ಬೇಕಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಜಗದೀಶ್ ಮಾಹಿತಿ ನೀಡಿದರು. ಜಾಗ ನೀಡಲು ಕೆಲವರು ಆಕ್ಷೇಪ ಎತ್ತಿದ್ದಾರೆ ಎಂದು ಪಿಡಿಒಗಳು ಮಾಹಿತಿ ನೀಡದರು.</p>.<p>ರಾಂಪುರದಲ್ಲಿ ಜಾಗ ಇದ್ದರೂ ನಿರ್ಮಾಣಕ್ಕೆ ಮುಂದಾಗದ ಕುರಿತು, ಭೂಮಿ ಪೂಜೆಗೆ ಶಾಸಕರ ದಿನಾಂಕ ಸಿಕ್ಕಿಲ್ಲ ಎಂದು ಕೆ.ಆರ್.ಐ.ಡಿ.ಬಿ.ನ ಚಂದ್ರಾನಾಯ್ಕ ಪ್ರತಿಕ್ರಿಯಿಸಿದರು.</p>.<p>‘ಒಂದೆರಡು ದಿನಗಳಲ್ಲಿ ಶಾಸಕರ ದಿನಾಂಕ ನಿಗದಿ ಮಾಡಬೇಕು. ಇಲ್ಲ<br />ವಾದಲ್ಲಿ ಕಾಮಗಾರಿ ಪ್ರಾರಂಭಿಸಬೇಕು’ ಎಂದು ಸಚಿಸಲಾಯಿತು.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಸಭೆಗೆ ಗೈರಾಗಿದ್ದರು. ಅವರ ಪರವಾಗಿ ಹಾಜರಿದ್ದ ಗಾರ್ಡ್, ಪ್ರಗತಿ ಬಗ್ಗೆ ಸರಿಯಾದ ಮಾಹಿತಿ ನೀಡಲಿಲ್ಲ.</p>.<p>ತಾಲ್ಲೂಕು ವೈದ್ಯಾಧಿಕಾರಿ ಷಣ್ಮುಖನಾಯ್ಕ, ಕೃಷಿ ಸಹಾಯಕ ಶ್ಯಾಂ ಸುಂದರ್, ಬಿಇಒ ಉಮಾದೇವಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನಾ ಇಲಾಖೆ, ಕಂದಾಯ ಮತ್ತಿತರ ಇಲಾಖೆ ಅಧಿಕಾರಿಗಳು ವರದಿ ನೀಡಿದರು. ಉಪಾಧ್ಯಕ್ಷೆ ಮಮತಾ ನಾಗರಾಜ ಇದ್ದರು.</p>.<p>ಸಭೆಗೆ ಗೈರಾಗಿದ್ದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಿರ್ಣಯ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>