ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ವೇಳೆ ನೇಮಿರಾಜ ನಾಯ್ಕ ಅವರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಸಲು ಮುಂದಾದರು. ನನ್ನ ವಿರುದ್ಧ ಗಲಾಟೆಗೆ ಪ್ರಚೋದನೆ ನೀಡಿದರು. ಆಗ ನಾನು ತೋಳು ತಟ್ಟಿದ್ದು ನಿಜ. ಶಾಸಕನಾದ ನನ್ನ ಮೇಲೆ ಹಲ್ಲೆಗೆ ಬಂದರೆ ನಾನು ಸುಮ್ಮನಿರಬೇಕೆ? ಸ್ಥಳೀಯ ಪೊಲೀಸ್ ಅಧಿಕಾರಿಗಳಿದ್ದರೂ ಕ್ರಮಕ್ಕೆ ಮುಂದಾಗಲಿಲ್ಲ. ಪೊಲೀಸ್ ವ್ಯವಸ್ಥೆಯ ವೈಫಲ್ಯದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆ ನೀಡಬೇಕು’ ಎಂದು ಕೋರಿರುವೆ’ ಎಂದರು.