ಕನ್ನಡ ಹಾಗೂ ಕನ್ನಡೇತರ ಮಾತೃಭಾಷೆಗಳಾದ ತುಳು, ಕೊಡವ, ತೆಲುಗು, ಉರ್ದು, ಕೊಂಕಣಿ, ಲಂಬಾಣಿ, ಮರಾಠಿ ಮುಂತಾದ ಭಾಷೆಗಳ ಮೇಲೆ ಇಂಗ್ಲಿಷ್, ಹಿಂದಿ, ಸಂಸ್ಕೃತ ಭಾಷೆಗಳನ್ನು ಒತ್ತಾಯವಾಗಿ ಹೇರುವ ಹುನ್ನಾರವಾಗಿದೆ. ಇದರಿಂದ ಲಕ್ಷಾಂತರ ಅಂಗನವಾಡಿ ಕೇಂದ್ರಗಳು, ಏಕೋಪಾಧ್ಯಾಯ ಹಾಗೂ ವಿದ್ಯಾರ್ಥಿಗಳ ಕೊರತೆ ಎದುರಿಸುವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಶಾಶ್ವತವಾಗಿ ಮುಚ್ಚಲಿವೆ ಎಂದು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿದರು.