<p class="rtejustify"><strong>ಹೊಸಪೇಟೆ (ವಿಜಯನಗರ): </strong>ಸತತವಾಗಿ ತೈಲ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p class="rtejustify">ನಗರದ ಶ್ರಮಿಕ ಭವನದ ಎದುರು ಸೇರಿದ ಕಾರ್ಯಕರ್ತರು, ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p class="rtejustify">ಪಕ್ಷದ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ ಮಾತನಾಡಿ, ‘ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಸಿರುವುದು ಜನವಿರೋಧಿ ನೀತಿಯಾಗಿದೆ. ಬಳ್ಳಾರಿ–ವಿಜಯನಗರ ಜಿಲ್ಲೆಯಲ್ಲಿ ಪೆಟ್ರೋಲ್ ದರ ನೂರು ರೂಪಾಯಿ ಗಡಿ ದಾಟಿದೆ. ಸರ್ಕಾರದ ಈ ನೀತಿ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಲಾಕ್ಡೌನ್ ಇಲ್ಲದಿದ್ದರೆ ಜನ ಬೀದಿಗಿಳಿಯುತ್ತಿದ್ದರು’ ಎಂದು ಹೇಳಿದರು.</p>.<p class="rtejustify">ಮುಖಂಡ ಎ ಕರುಣಾನಿಧಿ ಮಾತನಾಡಿ, ‘ತೈಲ ಉತ್ಪನ್ನಗಳ ಮೇಲಿನ ಸುಂಕ ಕಡಿಮೆಗೊಳಿಸಿದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತದೆ. ಜಿಎಸ್ಟಿ ವ್ಯಾಪ್ತಿಗೆ ತಂದರೆ ₹50ರ ಆಸುಪಾಸಿಗೆ ತೈಲ ದರ ಇಳಿಕೆಯಾಗುತ್ತದೆ. ಆದರೆ, ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ತೈಲ ದರ ಏರಿಕೆಯಾಗಿರುವುದರಿಂದ ಬರುವ ದಿನಗಳಲ್ಲಿ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತದೆ. ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದರು.</p>.<p class="rtejustify">ಮುಖಂಡರಾದ ಎಂ ಜಂಬಯ್ಯ ನಾಯಕ, ಎಂ. ಗೋಪಾಲ, ಯಲ್ಲಾಲಿಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಹೊಸಪೇಟೆ (ವಿಜಯನಗರ): </strong>ಸತತವಾಗಿ ತೈಲ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p class="rtejustify">ನಗರದ ಶ್ರಮಿಕ ಭವನದ ಎದುರು ಸೇರಿದ ಕಾರ್ಯಕರ್ತರು, ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p class="rtejustify">ಪಕ್ಷದ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ ಮಾತನಾಡಿ, ‘ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಸಿರುವುದು ಜನವಿರೋಧಿ ನೀತಿಯಾಗಿದೆ. ಬಳ್ಳಾರಿ–ವಿಜಯನಗರ ಜಿಲ್ಲೆಯಲ್ಲಿ ಪೆಟ್ರೋಲ್ ದರ ನೂರು ರೂಪಾಯಿ ಗಡಿ ದಾಟಿದೆ. ಸರ್ಕಾರದ ಈ ನೀತಿ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಲಾಕ್ಡೌನ್ ಇಲ್ಲದಿದ್ದರೆ ಜನ ಬೀದಿಗಿಳಿಯುತ್ತಿದ್ದರು’ ಎಂದು ಹೇಳಿದರು.</p>.<p class="rtejustify">ಮುಖಂಡ ಎ ಕರುಣಾನಿಧಿ ಮಾತನಾಡಿ, ‘ತೈಲ ಉತ್ಪನ್ನಗಳ ಮೇಲಿನ ಸುಂಕ ಕಡಿಮೆಗೊಳಿಸಿದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತದೆ. ಜಿಎಸ್ಟಿ ವ್ಯಾಪ್ತಿಗೆ ತಂದರೆ ₹50ರ ಆಸುಪಾಸಿಗೆ ತೈಲ ದರ ಇಳಿಕೆಯಾಗುತ್ತದೆ. ಆದರೆ, ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ತೈಲ ದರ ಏರಿಕೆಯಾಗಿರುವುದರಿಂದ ಬರುವ ದಿನಗಳಲ್ಲಿ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತದೆ. ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದರು.</p>.<p class="rtejustify">ಮುಖಂಡರಾದ ಎಂ ಜಂಬಯ್ಯ ನಾಯಕ, ಎಂ. ಗೋಪಾಲ, ಯಲ್ಲಾಲಿಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>