ಅಕ್ಷರ ದಾಸೋಹ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರವೇಶ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕು. ಉಚಿತ ಆರೋಗ್ಯ ಸೌಲಭ್ಯ ಒದಗಿಸಬೇಕು. ಎಲ್ಲರ ಸೇವೆ ಕಾಯಂಗೊಳಿಸಿ, ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷೆ ಎಚ್. ಯಶೋದಮ್ಮ, ಕಾರ್ಯದರ್ಶಿ ಕೆ. ನಾಗರತ್ನಮ್ಮ, ಖಜಾಂಚಿ ಸಿ.ವೈ. ಸೌಮ್ಯ, ವಿಜಯಮ್ಮ ಸೇರಿದಂತೆ ಮೊದಲಾದವರು ಇದ್ದರು.