ನಂತರ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಿರ್ಮಾಣ ಕಾರ್ಯ ಸೇರಿದಂತೆ ಇತರೆ ಕೆಲಸಗಳಿಗಾಗಿ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಇತರೆ ರಾಜ್ಯಗಳಿಂದ ಅನೇಕ ಜನ ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಬಂದು ಇಲ್ಲಿಯೇ ನೆಲೆಸಿದ್ದಾರೆ. ಆದರೆ, ಆ ಪ್ರದೇಶದಲ್ಲಿ ಮೂಲಸೌಕರ್ಯ ಕಲ್ಪಿಸದೆ ನಿರ್ಲಕ್ಷಿಸಲಾಗಿದೆ. ಹಲವು ಸಲ ಈ ಸಂಬಂಧ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.