ಬಳ್ಳಾರಿ: ‘ನಗರದಲ್ಲಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸೋನಾಮಸೂರಿ ಅಕ್ಕಿಯ ಅನ್ನ ನೀಡದೆ ನ್ಯಾಯಬೆಲೆ ಅಂಗಡಿ ಅಕ್ಕಿಯ ಅನ್ನವನ್ನು ಬಡಿಸಲಾಗುತ್ತಿದೆ. ಮೊಟ್ಟೆ, ಮಾಂಸದಂಥ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದೆ’ ಎಂದು ದೂರಿ ನೂರಾರು ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಧರಣಿ ನಡೆಸಿದರು.