<p><strong>ಕಮಲಾಪುರ:</strong>ವೇತನ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರು ಕಪ್ಪುಪಟ್ಟಿ ಧರಿಸಿ ಪ್ರಥಮ ವರ್ಷದ ಪರೀಕ್ಷಾ ಕಾರ್ಯ ನಿರ್ವಹಿಸಿದರು.</p>.<p>ಉಪನ್ಯಾಸಕ ಸುಭಾಷ ಜಾಧವ ಮಾತನಾಡಿ, ‘ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ ಜಿ.ಕುಮಾರನಾಯಕ ಆಯೋಗ ಉಪನ್ಯಾಸಕರಿಗೆ 4 ವೇತನ ಬಡ್ತಿಗಳನ್ನು ಕೊಡುವಂತೆ ಶಿಫಾರಸು ಮಾಡಿತ್ತು.ಸಿದ್ದರಾಮಯ್ಯ ಸರ್ಕಾರದಲ್ಲಿ ಒಂದು ವೇತನ ಬಡ್ತಿಕೊಡಲಾಗಿದೆ. ಇನ್ನುಳಿದ 3 ವೇತನ ಬಡ್ತಿ ಶೀಘ್ರ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವರ್ಗಾವಣೆ ನಿಯಮ ಸಡಿಲಗೊಳಿಸುವುದು, ಉಪನ್ಯಾಸಕರ ಹುದ್ದೆಯಿಂದ ಪ್ರಾಂಶುಪಾಲರ ಹುದ್ದೆಗೆ ತ್ವರಿತಗತಿಯಲ್ಲಿ ಬಡ್ತಿ ನೀಡುವುದು ಹಾಗೂ ರಾಜ್ಯ ಉಪನ್ಯಾಸಕರ ಸಂಘದ ನಿರ್ಣಯದಂತೆ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಅವುಗಳನ್ನು ಈಡೇರಿಸುವಲ್ಲಿ ಎಲ್ಲ ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಹೀಗಾಗಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಉಪನ್ಯಾಸಕ ಯಲ್ಲಪ್ಪ ತಳವಾರ, ನಾಗರಾಜ ಮೈಲವಾರ, ಎಸ್ ಎನ್.ಪಾಟೀಲ, ಭೀಮಶೆಟ್ಟಿ ರು ದ್ರಾಕ್ಷಿ, ಬಾಲಕಿಯರ ಕಾಲೇಜಿನ ಪ್ರಾಚಾರ್ಯ ಜಿ.ಪಿ.ಭೂಸಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ:</strong>ವೇತನ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರು ಕಪ್ಪುಪಟ್ಟಿ ಧರಿಸಿ ಪ್ರಥಮ ವರ್ಷದ ಪರೀಕ್ಷಾ ಕಾರ್ಯ ನಿರ್ವಹಿಸಿದರು.</p>.<p>ಉಪನ್ಯಾಸಕ ಸುಭಾಷ ಜಾಧವ ಮಾತನಾಡಿ, ‘ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ ಜಿ.ಕುಮಾರನಾಯಕ ಆಯೋಗ ಉಪನ್ಯಾಸಕರಿಗೆ 4 ವೇತನ ಬಡ್ತಿಗಳನ್ನು ಕೊಡುವಂತೆ ಶಿಫಾರಸು ಮಾಡಿತ್ತು.ಸಿದ್ದರಾಮಯ್ಯ ಸರ್ಕಾರದಲ್ಲಿ ಒಂದು ವೇತನ ಬಡ್ತಿಕೊಡಲಾಗಿದೆ. ಇನ್ನುಳಿದ 3 ವೇತನ ಬಡ್ತಿ ಶೀಘ್ರ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವರ್ಗಾವಣೆ ನಿಯಮ ಸಡಿಲಗೊಳಿಸುವುದು, ಉಪನ್ಯಾಸಕರ ಹುದ್ದೆಯಿಂದ ಪ್ರಾಂಶುಪಾಲರ ಹುದ್ದೆಗೆ ತ್ವರಿತಗತಿಯಲ್ಲಿ ಬಡ್ತಿ ನೀಡುವುದು ಹಾಗೂ ರಾಜ್ಯ ಉಪನ್ಯಾಸಕರ ಸಂಘದ ನಿರ್ಣಯದಂತೆ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಅವುಗಳನ್ನು ಈಡೇರಿಸುವಲ್ಲಿ ಎಲ್ಲ ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಹೀಗಾಗಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಉಪನ್ಯಾಸಕ ಯಲ್ಲಪ್ಪ ತಳವಾರ, ನಾಗರಾಜ ಮೈಲವಾರ, ಎಸ್ ಎನ್.ಪಾಟೀಲ, ಭೀಮಶೆಟ್ಟಿ ರು ದ್ರಾಕ್ಷಿ, ಬಾಲಕಿಯರ ಕಾಲೇಜಿನ ಪ್ರಾಚಾರ್ಯ ಜಿ.ಪಿ.ಭೂಸಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>