<p><strong>ಬಳ್ಳಾರಿ:</strong> ‘ತುಂಗಭದ್ರಾ ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ ಡಿ.20ರಿಂದ ಜ.5 ರವರೆಗೆ ನೀರು ಹರಿಸಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಗೋಣಿಬಸಪ್ಪ ಆಗ್ರಹಿಸಿದರು.</p>.<p>‘ಮೆಣಸಿನಕಾಯಿ, ಹತ್ತಿ, ಜೋಳಕ್ಕೆ ನೀರು ಬೇಕಿದೆ. ನೀರು ಹರಿಸದಿದ್ದರೆ ಎಚ್ಎಲ್ ಸಿ ಕಾಲುವೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ’ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರವು ಹೋರಾಟಕ್ಕೆ ಮಣಿದು ಹಂತ ಹಂತವಾಗಿ ರೈತರ ಸಾಲಮನ್ನಾ ಮಾಡುತ್ತಿದೆ. ಕೇಂದ್ರ ಸರ್ಕಾರವೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಸಾಲ ಮನ್ನಾ ವಿಚಾರದಲ್ಲಿ ಆಸಕ್ತಿ ವಹಿಸಿ ರೈತರ ಹಿತ ಕಾಪಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಕಬ್ಬಿನ ಬೆಲೆ ವಿಚಾರದಲ್ಲಿ ಕಾರ್ಖಾನೆ ಮಾಲೀಕರು ವಿಳಂಬ ಮಾಡುತ್ತಿದ್ದಾರೆ. ಕಬ್ಬಿನಲ್ಲಿ ಸಕ್ಕರೆ ಅಂಶದ ಪ್ರಮಾಣದ ಮೇಲೆ ಬೆಲೆ ನಿಗದಿ ಮಾಡಿ 12 ತಿಂಗಳೂ ಖರೀದಿಸಬೇಕು. ಕಬ್ಬಿನ ಖರೀದಿಯಲ್ಲಿ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿ, ಪ್ರಮಾಣವನ್ನು ಪರಿಶೀಲಿಸಬೇಕು’ ಎಂದರು.</p>.<p>‘ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹ 2750ಬೆಲೆ ಘೋಷಿಸಿದ್ದು, ಬೆಳೆಗಾರರಿಗೆ ₹ 2,500 ಮಾತ್ರ ಕೊಟ್ಟು ವಂಚಿಸಲಾಗುತ್ತಿದೆ. ಜಿಲ್ಲಾಧಿಕಾರಿಯು ತಂಡ ರಚಿಸಿ, ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ನಿಗದಿತ ಬೆಲೆಯನ್ನು ಕೊಡುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಮರಳಿನ ಕೊರತೆಯಿಂದ ಬಡವರಿಗೆ ಮನೆ ಕಟ್ಟಿಸಿಕೊಳ್ಳಲು ಅಗುತ್ತಿಲ್ಲ. ಪಕ್ಕದ ಆಂಧ್ರದಲ್ಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತ ಮರಳು ನೀಡುತ್ತಿರುವಂತೆ ರಾಜ್ಯ ಸರ್ಕಾರವೂ ಕೂಡ ಮರಳಿನ ಕೊರತೆ ನೀಗಿಸಿ, ಬಿಪಿಎಲ್ ಕಾರ್ಡುದಾರರು ಮತ್ತು ಸಣ್ಣ ರೈತರಿಗೆ ಉಚಿತ ಮರಳು ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಂದಾಲ್ ಕಂಪನಿ ತುಂಗಭದ್ರ ಜಲಾಶಯದಿಂದ ನೀರು ಬಳಸಿಕೊಂಡು ಸರ್ಕಾರಕ್ಕೆ ವಿದ್ಯುತ್ ಮಾರಾಟ ಮಾಡುತ್ತಿದೆ. ಆದರೆ, ಮೂರು ರಾಜ್ಯಗಳ ಲೋಕಸಭಾ ಸದಸ್ಯರು ಹೂಳು ತೆಗೆಯುವ ಬಗ್ಗೆ ಮಾತನಾಡುತ್ತಿಲ್ಲ. ಸಮಾನಾಂತರ ಜಲಾಶಯ ನಿರ್ಮಿಸಿ ವಿದ್ಯುತ್ ಉತ್ಪಾದನೆ ಬಗ್ಗೆ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೃಷ್ಣ, ಎಂ.ಎಲ್.ಕೆ.ನಾಯಡು, ಬಿ.ವಿ.ಯರ್ರಿಸ್ವಾಮಿ, ಎಂ.ಈಶ್ವರಪ್ಪ, ಅಡವಿ ಸ್ವಾಮಿ, ಹೊನ್ನೂರ್ ಸ್ವಾಮಿ, ಯರ್ರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ತುಂಗಭದ್ರಾ ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ ಡಿ.20ರಿಂದ ಜ.5 ರವರೆಗೆ ನೀರು ಹರಿಸಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಗೋಣಿಬಸಪ್ಪ ಆಗ್ರಹಿಸಿದರು.</p>.<p>‘ಮೆಣಸಿನಕಾಯಿ, ಹತ್ತಿ, ಜೋಳಕ್ಕೆ ನೀರು ಬೇಕಿದೆ. ನೀರು ಹರಿಸದಿದ್ದರೆ ಎಚ್ಎಲ್ ಸಿ ಕಾಲುವೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ’ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರವು ಹೋರಾಟಕ್ಕೆ ಮಣಿದು ಹಂತ ಹಂತವಾಗಿ ರೈತರ ಸಾಲಮನ್ನಾ ಮಾಡುತ್ತಿದೆ. ಕೇಂದ್ರ ಸರ್ಕಾರವೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಸಾಲ ಮನ್ನಾ ವಿಚಾರದಲ್ಲಿ ಆಸಕ್ತಿ ವಹಿಸಿ ರೈತರ ಹಿತ ಕಾಪಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಕಬ್ಬಿನ ಬೆಲೆ ವಿಚಾರದಲ್ಲಿ ಕಾರ್ಖಾನೆ ಮಾಲೀಕರು ವಿಳಂಬ ಮಾಡುತ್ತಿದ್ದಾರೆ. ಕಬ್ಬಿನಲ್ಲಿ ಸಕ್ಕರೆ ಅಂಶದ ಪ್ರಮಾಣದ ಮೇಲೆ ಬೆಲೆ ನಿಗದಿ ಮಾಡಿ 12 ತಿಂಗಳೂ ಖರೀದಿಸಬೇಕು. ಕಬ್ಬಿನ ಖರೀದಿಯಲ್ಲಿ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿ, ಪ್ರಮಾಣವನ್ನು ಪರಿಶೀಲಿಸಬೇಕು’ ಎಂದರು.</p>.<p>‘ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹ 2750ಬೆಲೆ ಘೋಷಿಸಿದ್ದು, ಬೆಳೆಗಾರರಿಗೆ ₹ 2,500 ಮಾತ್ರ ಕೊಟ್ಟು ವಂಚಿಸಲಾಗುತ್ತಿದೆ. ಜಿಲ್ಲಾಧಿಕಾರಿಯು ತಂಡ ರಚಿಸಿ, ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ನಿಗದಿತ ಬೆಲೆಯನ್ನು ಕೊಡುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಮರಳಿನ ಕೊರತೆಯಿಂದ ಬಡವರಿಗೆ ಮನೆ ಕಟ್ಟಿಸಿಕೊಳ್ಳಲು ಅಗುತ್ತಿಲ್ಲ. ಪಕ್ಕದ ಆಂಧ್ರದಲ್ಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತ ಮರಳು ನೀಡುತ್ತಿರುವಂತೆ ರಾಜ್ಯ ಸರ್ಕಾರವೂ ಕೂಡ ಮರಳಿನ ಕೊರತೆ ನೀಗಿಸಿ, ಬಿಪಿಎಲ್ ಕಾರ್ಡುದಾರರು ಮತ್ತು ಸಣ್ಣ ರೈತರಿಗೆ ಉಚಿತ ಮರಳು ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಂದಾಲ್ ಕಂಪನಿ ತುಂಗಭದ್ರ ಜಲಾಶಯದಿಂದ ನೀರು ಬಳಸಿಕೊಂಡು ಸರ್ಕಾರಕ್ಕೆ ವಿದ್ಯುತ್ ಮಾರಾಟ ಮಾಡುತ್ತಿದೆ. ಆದರೆ, ಮೂರು ರಾಜ್ಯಗಳ ಲೋಕಸಭಾ ಸದಸ್ಯರು ಹೂಳು ತೆಗೆಯುವ ಬಗ್ಗೆ ಮಾತನಾಡುತ್ತಿಲ್ಲ. ಸಮಾನಾಂತರ ಜಲಾಶಯ ನಿರ್ಮಿಸಿ ವಿದ್ಯುತ್ ಉತ್ಪಾದನೆ ಬಗ್ಗೆ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೃಷ್ಣ, ಎಂ.ಎಲ್.ಕೆ.ನಾಯಡು, ಬಿ.ವಿ.ಯರ್ರಿಸ್ವಾಮಿ, ಎಂ.ಈಶ್ವರಪ್ಪ, ಅಡವಿ ಸ್ವಾಮಿ, ಹೊನ್ನೂರ್ ಸ್ವಾಮಿ, ಯರ್ರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>