ಪಾಲಿಕೆಯಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆಯಲ್ಲು ಮಾತನಾಡಿದ ಅವರು, ‘ನೀರು ಸರಬರಾಜು ನಿರ್ವಹಣೆ ಕುರಿತು ಎಂಜನಿಯರ್ಗಳಿಗೆ ಸ್ಪಷ್ಟಜ್ಞಾನ ಇರದಿರುವುದು ನಗರ ನೀರು ಸರಬರಾಜು ಮತ್ತು ಒಳಚರಂಡಿ ವಿಷಯದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿದರೆ ಗೊತ್ತಾಗುತ್ತದೆ. ಸಮಸ್ಯೆ ಕಂಡುಬಂದರೆ ಅಲ್ಪಸ್ವಲ್ಪ ರಿಪೇರಿ ಮಾಡಿ ಕೈ ತೊಳೆದುಕೊಳ್ಳುತ್ತಾರೆಯೇ ಹೊರತು ಮೂಲ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವ ಕೆಲಸವನ್ನು ಮಾಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.