ಬಡತನದಲ್ಲಿ ಬೆಳೆದು ಪಿಎಸ್ಐ ಉದ್ಯೋಗದಲ್ಲಿರುವ ಶಾಂತಪ್ಪ ಜಡೆಮ್ಮನಗರ್ ಅವರಿಗೆ ವಲಸೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದು ಇಷ್ಟ ಇರಲಿಲ್ಲ. ಬಿಡುವಿನ ವೇಳೆಯಲ್ಲಿ ಠಾಣೆ ವ್ಯಾಪ್ತಿಯ ನಾಗರಬಾವಿ, ವಿನಾಯಕ ನಗರ, ವರ್ತುಲ ರಸ್ತೆ ಸುತ್ತಮುತ್ತ ವಾಸವಿರುವ ಅವರ ಗುಡಿಸಲುಗಳ ಬಳಿ ತೆರಳಿ ಪ್ರತಿನಿತ್ಯ ಒಂದು ಗಂಟೆ ಪಾಠಮಾಡುವ ಮೂಲಕ ಗಮನ ಸೆಳೆದಿದ್ದಾರೆ.