ಇನ್ನು, ನಗರದ ತಾಲ್ಲೂಕು ಕಚೇರಿ, ನಗರಸಭೆಯ ಆವರಣದಲ್ಲೂ ಜನ ಕಂಡು ಬಂದರು. ಆಸ್ತಿ ನೋಂದಣಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೀಗೆ ಇತರೆ ಕಚೇರಿ ಕೆಲಸಕ್ಕಾಗಿ ಗ್ರಾಮೀಣ ಪ್ರದೇಶಗಳಿಂದ ಜನ ಬಂದಿದ್ದರು. ಮಧ್ಯಾಹ್ನ ಬಿಸಿಲು ಏರುತ್ತಿದ್ದಂತೆ ಜನರ ಓಡಾಟ ನಿಧಾನವಾಗಿ ಕಡಿಮೆಯಾಯಿತು. ಪ್ರಮುಖ ರಸ್ತೆಗಳಲ್ಲಿ ವಾಹನಗಳ ಓಡಾಟ ತಗ್ಗಿತು. ಬಟ್ಟೆ ಅಂಗಡಿಗಳನ್ನು ತೆರೆಯಲು ಪೊಲೀಸರು ಅವಕಾಶ ಕಲ್ಪಿಸಲಿಲ್ಲ.