<p><strong>ಹೊಸಪೇಟೆ: </strong>ತಾಲ್ಲೂಕಿನ ಹಂಪಿ ಪುರಂದರ ಮಂಟಪದಲ್ಲಿ ಗುರುವಾರ ಪುರಂದರದಾಸರ 536ನೇ ಜಯಂತಿ ಆಚರಿಸಲಾಯಿತು.</p>.<p>ಪ್ರಾಣೇಶ್ ಆಚಾರ್, ಫಣಿರಾಜ್ ಆಚಾರ್, ರವಿ ಪಾಟೀಲ ಅವರು ಗಂಗಾ ಪೂಜೆ, ಗೋ ಪೂಜೆ ನೆರವೇರಿಸಿ, ಪುರಂದರದಾಸರ ಪ್ರತಿಮೆಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ನೈವೇದ್ಯ ಸಮರ್ಪಿಸಿದರು.</p>.<p>ವಡಕರಾಯ ಭಜನಾ ಮಂಡಳಿ, ಕಮಲಾಪುರದ ವಿಜಯ ವಿಠಲ ಭಜನಾ ಮಂಡಳಿ, ಯಾಜ್ಞವಲ್ಕ್ಯ ಭಜನಾ ಮಂಡಳಿಗಳು ದಾಸರ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟವು. ಜಿಲ್ಲಾ ಧರ್ಮಾಚಾರ ಸಂಪರ್ಕ ಪ್ರಮುಖ ಮೋಹನ್ ಚಿಕ್ಕಭಟ್ ಜೋಷಿ ಮಾತನಾಡಿ, ‘ಪುರಂದರದಾಸರು 4 ಲಕ್ಷದ 75 ಸಾವಿರ ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಮಾನಸ ಪುತ್ರ ವಿಜಯದಾಸರು 25 ಸಾವಿರ ಕೀರ್ತನೆಗಳನ್ನು ಬರೆದಿದ್ದಾರೆ’ ಎಂದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಉತ್ತರ ಪ್ರಾಂತದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಹಿರೇಮಠ ಮಾತನಾಡಿ, ‘ಹಂಪಿಯಲ್ಲಿ ಎರಡ್ಮೂರು ಇಲಾಖೆಗಳು ಕೆಲಸ ನಿರ್ವಹಿಸುತ್ತಿವೆ. ಹೀಗಿದ್ದರೂ ಅಲ್ಲಿನ ಸ್ಮಾರಕಗಳನ್ನು ಹಾಳುಗೆಡವಲಾಗುತ್ತಿದೆ. ಅವುಗಳಿಗೆ ಸೂಕ್ತ ರಕ್ಷಣೆ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಹಿಂದೂ ಜಾಗರಣ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿ ಮೌನೇಶ್ ಬಡಿಗೇರ್, ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜುನಾಥ ಶಾನಬೋಗ್, ನವೀನ್ಕುಮಾರ್, ಕಾಶಪ್ಪ, ಗಂಗಾಧರ, ವೀರೇಂದ್ರಕುಮಾರ್, ಈರಣ್ಣ ಕೆ. ಪೂಜಾರ್, ಪೂಜಾರ್ ಈರಪ್ಪ, ಬಸವರಾಜ್, ಶಕುಂತಲಾ, ಉಮಾದೇವಿ, ಕಮಲಾ ಇದ್ದರು.</p>.<p>ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ತಾಲ್ಲೂಕಿನ ಹಂಪಿ ಪುರಂದರ ಮಂಟಪದಲ್ಲಿ ಗುರುವಾರ ಪುರಂದರದಾಸರ 536ನೇ ಜಯಂತಿ ಆಚರಿಸಲಾಯಿತು.</p>.<p>ಪ್ರಾಣೇಶ್ ಆಚಾರ್, ಫಣಿರಾಜ್ ಆಚಾರ್, ರವಿ ಪಾಟೀಲ ಅವರು ಗಂಗಾ ಪೂಜೆ, ಗೋ ಪೂಜೆ ನೆರವೇರಿಸಿ, ಪುರಂದರದಾಸರ ಪ್ರತಿಮೆಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ನೈವೇದ್ಯ ಸಮರ್ಪಿಸಿದರು.</p>.<p>ವಡಕರಾಯ ಭಜನಾ ಮಂಡಳಿ, ಕಮಲಾಪುರದ ವಿಜಯ ವಿಠಲ ಭಜನಾ ಮಂಡಳಿ, ಯಾಜ್ಞವಲ್ಕ್ಯ ಭಜನಾ ಮಂಡಳಿಗಳು ದಾಸರ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟವು. ಜಿಲ್ಲಾ ಧರ್ಮಾಚಾರ ಸಂಪರ್ಕ ಪ್ರಮುಖ ಮೋಹನ್ ಚಿಕ್ಕಭಟ್ ಜೋಷಿ ಮಾತನಾಡಿ, ‘ಪುರಂದರದಾಸರು 4 ಲಕ್ಷದ 75 ಸಾವಿರ ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಮಾನಸ ಪುತ್ರ ವಿಜಯದಾಸರು 25 ಸಾವಿರ ಕೀರ್ತನೆಗಳನ್ನು ಬರೆದಿದ್ದಾರೆ’ ಎಂದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಉತ್ತರ ಪ್ರಾಂತದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಹಿರೇಮಠ ಮಾತನಾಡಿ, ‘ಹಂಪಿಯಲ್ಲಿ ಎರಡ್ಮೂರು ಇಲಾಖೆಗಳು ಕೆಲಸ ನಿರ್ವಹಿಸುತ್ತಿವೆ. ಹೀಗಿದ್ದರೂ ಅಲ್ಲಿನ ಸ್ಮಾರಕಗಳನ್ನು ಹಾಳುಗೆಡವಲಾಗುತ್ತಿದೆ. ಅವುಗಳಿಗೆ ಸೂಕ್ತ ರಕ್ಷಣೆ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಹಿಂದೂ ಜಾಗರಣ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿ ಮೌನೇಶ್ ಬಡಿಗೇರ್, ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜುನಾಥ ಶಾನಬೋಗ್, ನವೀನ್ಕುಮಾರ್, ಕಾಶಪ್ಪ, ಗಂಗಾಧರ, ವೀರೇಂದ್ರಕುಮಾರ್, ಈರಣ್ಣ ಕೆ. ಪೂಜಾರ್, ಪೂಜಾರ್ ಈರಪ್ಪ, ಬಸವರಾಜ್, ಶಕುಂತಲಾ, ಉಮಾದೇವಿ, ಕಮಲಾ ಇದ್ದರು.</p>.<p>ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>