ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಥಮ ಪಿ.ಯು ಕನ್ನಡ ಪರೀಕ್ಷೆ ಮುಂದಕ್ಕೆ

ಪ್ರಶ್ನೆಪತ್ರಿಕೆಯಲ್ಲಿ ಲೋಪ
Last Updated 2 ಏಪ್ರಿಲ್ 2022, 2:51 IST
ಅಕ್ಷರ ಗಾತ್ರ

ಬಳ್ಳಾರಿ: ಶುಕ್ರವಾರ ಮಧ್ಯಾಹ್ನ ಪರೀಕ್ಷೆ ನಡೆಯುತ್ತಿದ್ದ ವೇಳೆ ಪ್ರಶ್ನೆ ಪತ್ರಿಕೆಯಲ್ಲಿರುವ ದೋಷ ಪತ್ತೆಯಾಗಿದ್ದರಿಂದ ಪ್ರಥಮ ಪಿ.ಯು ಕನ್ನಡ ಐಚ್ಛಿಕ (ಕೋಡ್‌ ಸಂಖ್ಯೆ 16) ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ತಿಂಗಳ 16ಕ್ಕೆ ಮರುನಿಗದಿ ಮಾಡಲಾಗಿದೆ.

‘ಪ್ರಶ್ನೆ ಪತ್ರಿಕೆಯಲ್ಲಿ ದ್ವಿತೀಯ ಪಿ.ಯು ಎಂದು ಮುದ್ರಣವಾಗಿತ್ತು. ಅಲ್ಲದೆ, ಕೆಲವು ಲೋಪದೋಷಗಳು ಕಂಡುಬಂದಿದ್ದರಿಂದ ವಿದ್ಯಾರ್ಥಿಗಳಿಗೆ ಗೊಂದಲ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಕೊನೇ ಕ್ಷಣದಲ್ಲಿ ಪರೀಕ್ಷೆ ಮುಂದೂಡಲಾಯಿತು’ ಎಂದು ಪಿ.ಯು ಇಲಾಖೆ ಮೂಲಗಳು ತಿಳಿಸಿವೆ.

ದ್ವಿತೀಯ ಪಿ.ಯು ಪೂರ್ವಸಿದ್ಧತಾ ಪರೀಕ್ಷೆಗೆ ಹೊಂದಿಸಲಾಗಿದ್ದ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ಇದು ಗಮನಕ್ಕೆ ಬಂದ ತಕ್ಷಣ ಪರೀಕ್ಷೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT