ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಘವೇಂದ್ರರ ಮಧ್ಯಾರಾಧನೆ

Last Updated 17 ಆಗಸ್ಟ್ 2019, 9:59 IST
ಅಕ್ಷರ ಗಾತ್ರ

ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆಯಲ್ಲಿರುವ ನಂಜನಗೂಡು ರಾಘವೇಂದ್ರಸ್ವಾಮಿ ಮಠದಲ್ಲಿ ಶನಿವಾರ ಶ್ರೀ ರಾಘವೇಂದ್ರ ಸ್ವಾಮಿಯ 348ನೇ ಆರಾಧನಾ ಮಹೋತ್ಸವದ ಅಂಗವಾಗಿ ನಡೆದ ಮಧ್ಯಾರಾಧನೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಭಾನುವಾರ ಉತ್ತರಾರಾಧನೆ ಜೊತೆಗೆ ರಥೋತ್ಸವ ಜರುಗಲಿದೆ.

ಆ. 15ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ನಗರದ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ರಾಯರ ದರ್ಶನ ಪಡೆಯುತ್ತಿದ್ದಾರೆ.

ಶನಿವಾರ ಹಸ್ತೋದಕ, ಸರ್ವ ಸೇವೆ, ವಿಶೇಷ ಫಲ ಪಂಚಾಮೃತ, ಸಾಮೂಹಿಕ ಪವಮಾನ ಹೋಮ, ಕನಕಮಹಾಪೂಜೆ, ಸರ್ವ ಸಮರ್ಪಣ ಸೇವೆ ಸೇರಿ ವಿವಿಧ ಧಾರ್ಮಿಕರ ಕಾರ್ಯಕ್ರಮಗಳು ನಡೆದವು. ಧರ್ಮಾಧಿಕಾರಿ ರಾಜಾ ಎಂ.ಬಿ ಪಂಬಣ್ಣ ತೀರ್ಥಾಚಾರ್ಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT