ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲನಿಮಿಷ ವರ್ಷಧಾರೆಯಾಯಿತು. ಅನಂತರ ಬಿಡುವು ಕೊಟ್ಟು, ಮಧ್ಯಾಹ್ನ 3.30ರಿಂದ ಸಂಜೆ 5ರ ವರೆಗೆ ಬಿರುಸಿನ ಮಳೆಯಾಯಿತು. ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಕಾಳಘಟ್ಟ, ನಾಗೇನಹಳ್ಳಿ, ಬಸವನದುರ್ಗ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಗುರುವಾರವೂ ಮೂರ್ನಾಲ್ಕು ಗಂಟೆ ಮಳೆಯಾಗಿತ್ತು. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಮಳೆಯಿಲ್ಲದೆ ಆತಂಕಗೊಂಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ.