ಭಾರಿ ಮಳೆಗೆ ತಾಲ್ಲೂಕಿನ ಹಂಪಿಯಲ್ಲಿ ಬಾಳೆ, ಧರ್ಮಸಾಗರದಲ್ಲಿ ಹತ್ತಿ, ಮೆಣಸಿನಕಾಯಿ, ಹೂವಿನಹಡಗಲಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿಯಲ್ಲಿ ಮೆಕ್ಕೆಜೋಳ, ಭತ್ತ, ರಾಗಿ ಗದ್ದೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಈಗ ಅದು ತಗ್ಗಿದೆ. ಆದರೆ, ಇನ್ನೂ ಎರಡ್ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದರಿಂದ ರೈತರ ಆತಂಕ ಕಡಿಮೆಯಾಗಿಲ್ಲ.